ಕರ್ನಾಟಕ

karnataka

ETV Bharat / state

ಮೆಟ್ರೋ ಕಾಮಗಾರಿ ಸ್ಥಳದಲ್ಲಿ 30 ಅಡಿ ಮಣ್ಣು ಕುಸಿತ: ಸ್ವಲ್ಪದರಲ್ಲೇ ತಪ್ಪಿದ ಭಾರಿ ದುರಂತ - ಮೆಟ್ರೋ ಕಾಮಗಾರಿ ಸ್ಥಳದಲ್ಲಿ 30 ಅಡಿ ಮಣ್ಣು ಕುಸಿತ

ಮೆಟ್ರೋ ಕಾಮಗಾರಿಯಿಂದ 30 ಅಡಿ ಮಣ್ಣು ಕುಸಿದು ಭಾರಿ ಅನಾಹುತ ಸಂಭವಿಸುವುದು ಸ್ವಲ್ಪದರಲ್ಲೇ ತಪ್ಪಿದೆ.

30 feet of soil collapsed in metro work at Bangalore
ಮೆಟ್ರೋ ಕಾಮಗಾರಿ ಸ್ಥಳದಲ್ಲಿ 30 ಅಡಿ ಮಣ್ಣು ಕುಸಿತ

By

Published : Sep 30, 2021, 2:23 PM IST

ಬೆಂಗಳೂರು:ಮೆಟ್ರೋ ಕಾಮಗಾರಿಯಿಂದ 30 ಅಡಿ ಮಣ್ಣು ಕುಸಿದು ಭಾರಿ ಅನಾಹುತ ಸಂಭವಿಸುವುದು ಸ್ವಲ್ಪದರಲ್ಲೇ ತಪ್ಪಿದೆ. ನಗರದ ಟ್ಯಾನರಿ ರಸ್ತೆಯಲ್ಲಿ ಮುಚ್ಚಿದ್ದ ಬಾವಿಯ ಮಣ್ಣು ಕುಸಿದು ಸಂಸ್ಥೆ ಅಪಾಯ ತಂದಿಟ್ಟಿದೆ ಎಂದು ಜನತೆ ದೂರುತ್ತಿದ್ದಾರೆ.

ಇತ್ತೀಚೆಗಷ್ಟೇ ಹೊರ ಬಂದ ಟನಲ್ ಬೋರಿಂಗ್ ಮಷಿನ್:

ರಾಜಧಾನಿಯ ಗೊಟ್ಟಿಗೆರೆಯಿಂದ ನಾಗವಾರದವರೆಗೆ ನಡೆಯುತ್ತಿರುವ ಮೆಟ್ರೋ ಕಾಮಗಾರಿಯಲ್ಲಿ ದುರಂತ ನಡೆದಿದೆ. ಇತ್ತೀಚೆಗಷ್ಟೆ ಸುರಂಗ ಕೊರೆದು ಊರ್ಜಾ (ಟನಲ್ ಬೋರಿಂಗ್ ಮಷಿನ್) ಹೊರ ಬಂದಿತ್ತು. ಟನಲ್ ಪ್ರೆಶರ್​​​ಗೆ ಮಣ್ಣು ಕುಸಿದು ಭಾರಿ ಸಮಸ್ಯೆ ಉಂಟಾಗಿದೆ. ಮುಂಜಾನೆ 3 ಗಂಟೆಯಲ್ಲಿ ಮುಚ್ಚಿದ್ದ ಬಾವಿಯ ಮಣ್ಣು ಕುಸಿದು ಕೆಳಗೆ ಬಿದ್ದಿದೆ ಎಂದು ಮೆಟ್ರೋ ಅಧಿಕಾರಿಗಳು ತಿಳಿಸಿದ್ದಾರೆ.

30 ಅಡಿ ಮಣ್ಣು ಕುಸಿತ

ಬಿಎಂಆರ್​​ಸಿಎಲ್ ಅಧಿಕಾರಿಗಳೇ ಕಾರಣ:

ಮಾಲೀಕ ಝಬೀ ಎನ್ನುವವವರಿಗೆ ಸೇರಿದ ಜಾಗದಲ್ಲಿ ನಡೆದ ಅನಾಹುತಕ್ಕೆ ಬಿಎಂಆರ್​​​ಸಿಎಲ್ ಅಧಿಕಾರಿಗಳೇ ಇದಕ್ಕೆ ಕಾರಣ ಎಂದು ಮಾಲೀಕರು ಹೇಳುತ್ತಿದ್ದಾರೆ. ಹೀಗಾಗಿ ನಮ್ಮ ಮೆಟ್ರೋ ಈ ಜಾಗ ಪಡೆದು ಇದಕ್ಕೆ ಪರಿಹಾರ ನೀಡಲಿ ಎಂದು ಮಾಲೀಕರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಉಪ ಚುನಾವಣೆ ಅಭ್ಯರ್ಥಿಗಳ ಆಯ್ಕೆ ಕಸರತ್ತು: ಶೀಘ್ರದಲ್ಲೇ ವರಿಷ್ಠರ ಭೇಟಿಗೆ ದೆಹಲಿಗೆ ತೆರಳಲಿರುವ ಸಿಎಂ

ABOUT THE AUTHOR

...view details