ಕರ್ನಾಟಕ

karnataka

By

Published : Feb 6, 2023, 1:51 PM IST

Updated : Feb 6, 2023, 5:02 PM IST

ETV Bharat / state

ಸಂಚಾರಿ ದಂಡ ಪಾವತಿಗೆ 50ಶೇ ರಿಯಾಯಿತಿ ಅವಕಾಶಕ್ಕೆ ಉತ್ತಮ ಸ್ಪಂದನೆ: ನಾಲ್ಕೇ ದಿನದಲ್ಲಿ 25 ಕೋಟಿ ರೂ ದಂಡ ವಸೂಲಿ

ಸಂಚಾರಿ ನಿಯಮ ಉಲ್ಲಂಘನೆಯ ದಂಡ ಪಾವತಿಗೆ ಶೇ 50 ರಿಯಾಯಿತಿ ಘೋಷಣೆಯಾದ ಬೆನ್ನಲ್ಲೇ ಪ್ರತಿ ದಿನ ಕೋಟಿ ಕೋಟಿ ದಂಡ ವಸೂಲಾಗುತ್ತಿದೆ. ಇನ್ನೂ 1 ಕೋಟಿಗೂ ಅಧಿಕ ಪ್ರಕರಣಗಳು ಇತ್ಯರ್ಥವಾಗಲು ಬಾಕಿ ಇದೆ.

50% discount on payment of traffic fine
ಸಂಚಾರಿ ದಂಡ ಪಾವತಿಗೆ 50ಶೇ ರಿಯಾಯಿತಿ

ಸಂಚಾರ ವಿಭಾಗದ ವಿಶೇಷ ಆಯುಕ್ತ ಎಂ.ಎ. ಸಲೀಂ

ಬೆಂಗಳೂರು:ಸರ್ಕಾರಿ ಆದೇಶದ ಅನ್ವಯ ಸಂಚಾರಿ ದಂಡ ಪಾವತಿಗೆ 50 ಶೇಕಡಾ ರಿಯಾಯಿತಿ ನೀಡಿರುವುದಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ನಾಲ್ಕನೇ ದಿನವೂ ಸಾರ್ವಜನಿಕರು ಸ್ವಯಂಪ್ರೇರಿತವಾಗಿ ದಂಡ ಪಾವತಿಸುತ್ತಿದ್ದು, 25 ಕೋಟಿ ರೂ ದಂಡ ಸಂಗ್ರಹವಾಗಿದೆ. ಫೆಬ್ರವರಿ 2ರಿಂದ ಇಲ್ಲಿಯವರೆಗೂ 8,68,405 ಪ್ರಕರಣಗಳಿಗೆ ಸಂಬಂಧಿಸಿದಂತೆ 25,42,52,000 ಕೋಟಿಗೂ ಅಧಿಕ ಮೊತ್ತದ ದಂಡ ಸಂಗ್ರಹವಾಗಿದ್ದು, ಇನ್ನೂ 1 ಕೋಟಿಗೂ ಅಧಿಕ ಪ್ರಕರಣಗಳು ಇತ್ಯರ್ಥವಾಗಬೇಕಿದೆ ಎಂದು ಸಂಚಾರ ವಿಭಾಗದ ವಿಶೇಷ ಆಯುಕ್ತ ಎಂ.ಎ. ಸಲೀಂ ತಿಳಿಸಿದ್ದಾರೆ.

ಪೊಲೀಸ್ ಠಾಣೆ, ಬೆಂಗಳೂರು ಒನ್ ಸೆಂಟರ್, ಪೇಟಿಎಂಗಳಲ್ಲಿ‌ ದಂಡ ಪಾವತಿಗೆ ಅವಕಾಶ ನೀಡಲಾಗಿದ್ದು, ದಂಡ ವಿಧಿಸಿರುವುದರಲ್ಲಿ ಸಮಸ್ಯೆಗಳಿದ್ದರೆ ಇನ್​ಫ್ಯಾಂಟ್ರಿ ರಸ್ತೆಯಲ್ಲಿರುವ ಸಂಚಾರ ನಿಯಂತ್ರಣ ಕೇಂದ್ರಕ್ಕೆ ಭೇಟಿ ನೀಡಿ ಪರಿಹರಿಸಿಕೊಳ್ಳಬಹುದಾಗಿದೆ. ದಂಡ ಪಾವತಿ ಮಾಡುವ ವೇಳೆ, ಕೆಲವು ನಕಲಿ ನಂಬರ್ ಪ್ಲೇಟ್​ಗಳಿಂದ ಸಮಸ್ಯೆಯಾಗಿರುವ ಬಗ್ಗೆಯೂ ದೂರುಗಳು ಬರುತ್ತಿದ್ದು, ಅಂತಹವುಗಳನ್ನು ಪತ್ತೆ ಹಚ್ಚಲಾಗುತ್ತಿದೆ. ಮುಂದಿನ ದಿನಗಳಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಡಾ. ಎಂ.ಎ. ಸಲೀಂ ತಿಳಿಸಿದ್ದಾರೆ.

50% ವಿನಾಯಿತಿ ಕಾಲಮಿತಿ ಮೂರು ತಿಂಗಳು ವಿಸ್ತರಿಸುವಂತೆ ಆಪ್ ಮಾಧ್ಯಮ ಸಂಚಾಲಕ ಜಗದೀಶ್‌ ಸದಂ ಸಿಎಂಗೆ ಪತ್ರ:ನಿಯಮ ಉಲ್ಲಂಘನೆಯ ದಂಡದ ಬಾಕಿ ಮೊತ್ತ ಪಾವತಿಯ ಶೇ. 50 ವಿನಾಯಿತಿಯ ಕಾಲಮಿತಿಯನ್ನು ಮೂರು ತಿಂಗಳು ವಿಸ್ತರಿಸಬೇಕು ಎಂದು ಆಗ್ರಹಿಸಿ ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್‌ ವಿ ಸದಂ ಮನವಿ ಮಾಡಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಪತ್ರ ಬರೆದ ಜಗದೀಶ್‌ ವಿ ಸದಂ, ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಶಿಫಾರಸಿನಂತೆ, ವಾಹನ ಸವಾರರು ಬಾಕಿ ಉಳಿಸಿಕೊಂಡಿರುವ ದಂಡವನ್ನು ಫೆಬ್ರವರಿ 11ರೊಳಗೆ ಪಾವತಿಸಿದಲ್ಲಿ ಶೇ. 50 ವಿನಾಯಿತಿ ನೀಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹೀಗೆ ವಿನಾಯಿತಿ ನೀಡುವ ಮೂಲಕ ವಾಹನ ಸವಾರರಿಗೆ ನೆರವಾಗುವುದು ಸ್ವಾಗತಾರ್ಹ. ಆದರೆ ಅತ್ಯಲ್ಪ ಅವಧಿಯ ಕಾಲಮಿತಿ ನಿಗದಿಪಡಿಸುವ ಮೂಲಕ ಕೇವಲ ಶ್ರೀಮಂತ ವಾಹನ ಸವಾರರಿಗೆ ಮಾತ್ರ ನೆರವಾಗಲು ರಾಜ್ಯ ಸರ್ಕಾರ ಮುಂದಾಗಿರುವುದು ಖಂಡನೀಯ ಎಂದು ಹೇಳಿದ್ದಾರೆ.

ಕೇವಲ ಒಂದು ವಾರಗಳ ಸಮಯಾವಕಾಶ ನೀಡುವುದರಿಂದ ಬಡ ಮತ್ತು ಮಧ್ಯಮ ವರ್ಗದ ವಾಹನ ಸವಾರರಿಗೆ ಹಣ ಹೊಂದಿಸಲು ಕಷ್ಟವಾಗುತ್ತದೆ. ಅಲ್ಲದೇ, ಅನೇಕ ವಾಹನ ಸವಾರರು ತಮ್ಮ ಮಕ್ಕಳ ಶಾಲಾ ಶುಲ್ಕ ಪಾವತಿಸುವುದು ಸೇರಿದಂತೆ ನಾನಾ ರೀತಿಯ ಅಗತ್ಯ ಖರ್ಚುಗಳು ಈ ಸಮಯದಲ್ಲಿರುತ್ತದೆ. ವಿನಾಯಿತಿಯ ಯೋಜನೆಯನ್ನು ದಿಢೀರ್‌ ಘೋಷಿಸಿರುವುದರಿಂದ ಮೊದಲೇ ಹಣವನ್ನು ಕೂಡಿಟ್ಟುಕೊಳ್ಳಲೂ ವಾಹನ ಸವಾರರಿಗೆ ಅವಕಾಶ ಸಿಕ್ಕಿರುವುದಿಲ್ಲ. ಆದ್ದರಿಂದ ಮುಖ್ಯಮಂತ್ರಿಯವರು ಈ ವಿನಾಯಿತಿ ಯೋಜನೆಯ ಕಾಲಮಿತಿಯನ್ನು ಮೂರು ತಿಂಗಳ ತನಕ ವಿಸ್ತರಿಸಬೇಕು. ಈ ಮೂಲಕ ಬಡ ಹಾಗೂ ಮಧ್ಯಮ ವರ್ಗದ ವಾಹನ ಸವಾರರಿಗೂ ವಿನಾಯಿತಿಯ ಸಿಗುವಂತೆ ಮಾಡಬೇಕು ಎಂದು ಜಗದೀಶ್‌ ವಿ ಸದಂ ಕೇಳಿಕೊಂಡಿದ್ದಾರೆ.

ಇದನ್ನೂ ಓದಿ:ಶೇ50ರಷ್ಟು ರಿಯಾಯಿತಿ ಎಫೆಕ್ಟ್: ಎರಡನೇ ದಿನವೂ ಕೋಟಿ‌ ಕೋಟಿ ಸಂಚಾರಿ ದಂಡ ಪಾವತಿ

Last Updated : Feb 6, 2023, 5:02 PM IST

ABOUT THE AUTHOR

...view details