ಕರ್ನಾಟಕ

karnataka

By

Published : Dec 18, 2020, 9:54 PM IST

ETV Bharat / state

84 ಜಿಲ್ಲಾ ನ್ಯಾಯಾಧೀಶರ ವರ್ಗಾವಣೆ: ಡಿ.28 ರಿಂದ ಆದೇಶ ಜಾರಿ

ಹಾಸನ ಜಿಲ್ಲಾ ನ್ಯಾಯಾಧೀಶರಾಗಿ ಕಾರ್ಯ ನಿರ್ವಹಿಸುತ್ತಿದ್ದ ರವೀಂದ್ರ ಹೆಗ್ಡೆ ಹಾಗೂ ಬೀದರ್ ಜಿಲ್ಲಾ ನ್ಯಾಯಾಧೀಶೆ ಹೆಚ್.ಆರ್. ರಾಧಾ ಹಾಗೂ ಬೆಳಗಾವಿ ಜಿಲ್ಲಾ ನ್ಯಾಯಾಧೀಶೆ ಎಮ್. ಲತಾಕುಮಾರಿ ಅವರನ್ನು ಬೆಂಗಳೂರಿನ ಸಿಟಿ ಸಿವಿಲ್ ಅಂಡ್ ಸೆಷನ್ಸ್ ಕೋರ್ಟ್ ಗೆ ವರ್ಗಾವಣೆ ಮಾಡಲಾಗಿದೆ.

High Court
ಹೈಕೋರ್ಟ್​

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲಾ ನ್ಯಾಯಾಲಯಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದ 27 ನ್ಯಾಯಾಧೀಶರನ್ನು ವರ್ಗಾವಣೆ ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ಹಾಗೆಯೇ, ಹಿರಿಯ ಸಿವಿಲ್ ನ್ಯಾಯಾಧೀಶ ಹುದ್ದೆಯಿಂದ ಜಿಲ್ಲಾ ನ್ಯಾಯಾಧೀಶರಾಗಿ ಬಡ್ತಿ ಪಡೆದಿರುವ 57 ನ್ಯಾಯಾಂಗ ಅಧಿಕಾರಿಗಳಿಗೂ ಹುದ್ದೆ ತೋರಿಸಿ ವರ್ಗಾಯಿಸಲಾಗಿದೆ.

ಈ ಕುರಿತು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ರಾಜೇಂದ್ರ ಬಾದಾಮಿಕರ್ ಅವರು ಆದೇಶ ಹೊರಡಿಸಿದ್ದು, ವರ್ಗಾವಣೆಗೊಂಡಿರುವ ನ್ಯಾಯಾಧೀಶರು ಡಿ. 28 ರಂದು ತಮ್ಮ ನಿಯೋಜಿತ ಸ್ಥಳಗಳಲ್ಲಿ ಕಾರ್ಯಾರಂಭ ಮಾಡಲಿದ್ದಾರೆ.

ಓದಿ:ಚಾರ್ಜ್​ಶೀಟ್ ಸಲ್ಲಿಕೆ ಅವಧಿ ವಿಸ್ತರಣೆ ಪ್ರಶ್ನಿಸಿ ಅರ್ಜಿ: ವಿಶೇಷ ನ್ಯಾಯಾಲಯದ ಕ್ರಮ ಸರಿ ಎಂದ ಹೈಕೋರ್ಟ್

ಇವರಲ್ಲಿ ಪ್ರಮುಖವಾಗಿ ಹಾಸನ ಜಿಲ್ಲಾ ನ್ಯಾಯಾಧೀಶರಾಗಿ ಕಾರ್ಯ ನಿರ್ವಹಿಸುತ್ತಿದ್ದ ರವೀಂದ್ರ ಹೆಗ್ಡೆ ಹಾಗೂ ಬೀದರ್ ಜಿಲ್ಲಾ ನ್ಯಾಯಾಧೀಶೆ ಹೆಚ್.ಆರ್. ರಾಧಾ ಹಾಗೂ ಬೆಳಗಾವಿ ಜಿಲ್ಲಾ ನ್ಯಾಯಾಧೀಶೆ ಎಮ್. ಲತಾಕುಮಾರಿ ಅವರನ್ನು ಬೆಂಗಳೂರಿನ ಸಿಟಿ ಸಿವಿಲ್ ಅಂಡ್ ಸೆಷನ್ಸ್ ಕೋರ್ಟ್ ಗೆ ವರ್ಗಾವಣೆ ಮಾಡಲಾಗಿದೆ.

ABOUT THE AUTHOR

...view details