ಕರ್ನಾಟಕ

karnataka

ETV Bharat / state

ಬೆಂಗಳೂರಲ್ಲಿ ಕೆಫೆ ಕಾಫಿ ಡೇ ಮ್ಯಾನೇಜರ್ ಮೇಲೆ ಮಾರಣಾಂತಿಕ ಹಲ್ಲೆ!

ಕಾಫಿ ಡೇಯಲ್ಲಿ ವಾಶ್ ರೂಮ್ ಬಳಸುವ ವಿಚಾರಕ್ಕೆ ಮ್ಯಾನೇಜರ್ ಹಾಗೂ ಗ್ರಾಹಕನ ನಡುವೆ ಮಾತಿನ ಚಕಮಕಿ ನಡೆದು ಕೈ ಕೈ ಮಿಲಾಯಿಸಿದ್ದಾರೆ. ಗಲಾಟೆ ತಾರಕಕ್ಕೇರಿ ಮ್ಯಾನೇಜರ್ ಮೇಲೆ ಹಲ್ಲೆ ನಡೆದಿರುವ ನಡೆದಿರುವ ಆರೋಪ ಕೇಳಿಬಂದಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

By

Published : Nov 24, 2020, 7:16 AM IST

Updated : Nov 24, 2020, 7:30 AM IST

a-man-beaten-cafe-coffee-day-manager-in-bangalore
ಕೆಫೆ ಕಾಫಿ ಡೇ ಮ್ಯಾನೆಜರ್ ಮೇಲೆ ಮಾರಣಾಂತಿಕ ಹಲ್ಲೆ

ಬೆಂಗಳೂರು: ಕೆಫೆ ಕಾಫಿ ಡೇ ಮ್ಯಾನೆಜರ್​​ ಮೇಲೆ ವ್ಯಕ್ತಿವೋರ್ವ ಮಾರಣಾಂತಿಕ ಹಲ್ಲೆ ನಡೆಸಿರುವ ಆರೋಪ ಪ್ರಕರಣ‌ ನಗರದ ಕಸ್ತೂರಿ ನಗರ ಕೆಫೆ ಕಾಫಿ ಡೇಯಲ್ಲಿ ನಡೆದಿದೆ.

ಬೆಂಗಳೂರಲ್ಲಿ ಕೆಫೆ ಕಾಫಿ ಡೇ ಮ್ಯಾನೇಜರ್ ಮೇಲೆ ಮಾರಣಾಂತಿಕ ಹಲ್ಲೆ!

ನವೀನ್ ಕುಮಾರ್ ಹಲ್ಲೆಗೊಳಗಾದ ಮ್ಯಾನೇಜರ್ ಆಗಿದ್ದು, ಸೋಮವಾರ ರಾತ್ರಿ 9ಗಂಟೆ ಸುಮಾರಿಗೆ ಕಾಫಿ ಡೇಗೆ ಬಂದಿದ್ದ ಗ್ರಾಹಕ ವಾಶ್ ರೂಮ್ ಬಳಸುವ ವಿಚಾರಕ್ಕೆ ಗಲಾಟೆ ಮಾಡಿದ್ದಾನೆ. ಬಳಿಕ ಇಬ್ಬರ ನಡುವೆ ವಾಗ್ವಾದ ನಡೆದಿದೆ ಎನ್ನಲಾಗ್ತಿದೆ.

ನಂತರ ಕಾಫಿ ಡೇಯಲ್ಲಿ ಅಸಭ್ಯವಾಗಿ ನಡೆದುಕೊಂಡ ವ್ಯಕ್ತಿಯನ್ನು ಮ್ಯಾನೇಜರ್ ಪ್ರಶ್ನಿಸಿದ್ದಾರೆ. ಪ್ರಶ್ನೆ ಮಾಡಿದ್ದಕ್ಕೆ ಮ್ಯಾನೇಜರ್ ಜೊತೆ ಗಲಾಟೆ ಮಾಡಿದ್ದಾನೆ. ಈ ವೇಳೆ ಮ್ಯಾನೇಜರ್ ಮೇಲೆ ಗ್ರಾಹಕ ಹಲ್ಲೆ ಮಾಡಿದ್ದಾನೆ ಎನ್ನಲಾಗ್ತಿದೆ. ಹಲ್ಲೆಯಿಂದ ಗಾಯಗೊಂಡಿರುವ ಮ್ಯಾನೇಜರ್​ ಅನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಘಟನೆ ಸಂಬಂಧ ಮ್ಯಾನೇಜರ್​​ ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

Last Updated : Nov 24, 2020, 7:30 AM IST

ABOUT THE AUTHOR

...view details