ಕರ್ನಾಟಕ

karnataka

By

Published : May 1, 2022, 7:13 PM IST

Updated : May 1, 2022, 7:28 PM IST

ETV Bharat / state

ಯುವತಿ ಮೇಲೆ ಆ್ಯಸಿಡ್ ದಾಳಿ.. ಆರೋಪಿ ಬಂಧನಕ್ಕೆ‌‌ ಒತ್ತಾಯಿಸಿ ಆಮ್​ ಆದ್ಮಿ ಪಕ್ಷದಿಂದ ಪ್ರತಿಭಟನೆ

ಆ್ಯಸಿಡ್ ದಾಳಿಕೋರ ನಾಗೇಶ್‌ ಎಂಬಾತನನ್ನು ಬಂಧಿಸಿ, ಗಲ್ಲುಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ಆಮ್‌ ಆದ್ಮಿ ಪಾರ್ಟಿಯು ನಗರದ ಕಾಮಾಕ್ಷಿಪಾಳ್ಯ ಪೊಲೀಸ್‌ ಠಾಣೆ ಮುಂಭಾಗ ಬೃಹತ್‌ ಪ್ರತಿಭಟನೆ ನಡೆಸಿತು.

ಆ್ಯಸಿಡ್ ದಾಳಿ ಆರೋಪಿ ಬಂಧನಕ್ಕೆ ಪ್ರತಿಭಟನೆ
ಆ್ಯಸಿಡ್ ದಾಳಿ ಆರೋಪಿ ಬಂಧನಕ್ಕೆ ಪ್ರತಿಭಟನೆ

ಬೆಂಗಳೂರು: ಕಳೆದ ಎರಡು ದಿನಗಳ ಹಿಂದೆ ನಗರದಲ್ಲಿ ನಡೆದ ಆ್ಯಸಿಡ್ ದಾಳಿ ಖಂಡಿಸಿ ಯುವತಿ‌ ವ್ಯಾಸಂಗ ಮಾಡಿದ್ದ ಶಾಲಾ ಆಡಳಿತ‌ ಮಂಡಳಿ ಹಾಗೂ ವಿದ್ಯಾರ್ಥಿಗಳು ಹಾಗೂ ಆಮ್​ ಆದ್ಮಿ ಪಕ್ಷದ ಕಾರ್ಯಕರ್ತರಿಂದ ಪ್ರತಿಭಟನಾ ಮೆರವಣಿಗೆ ನಡೆಯಿತು‌.

ಆ್ಯಸಿಡ್ ದಾಳಿ ಆರೋಪಿ ಬಂಧನಕ್ಕೆ ಪ್ರತಿಭಟನೆ

ಕಳೆದ ಎರಡು ದಿನಗಳ ಹಿಂದೆ ಯುವತಿ ಮೇಲೆ‌‌ ಪಾಗಲ್‌ ಪ್ರೇಮಿಯೇ ಸುಂಕದಕಟ್ಟೆಯ ಮುತ್ತೂಟ್ ಮಿನಿ ಫೈನಾನ್ಸ್ ಕಚೇರಿ ಆವರಣದಲ್ಲೇ ಆ್ಯಸಿಡ್ ಎರಚಿ ಪೈಶಾಚಿಕ ಕೃತ್ಯ ನಡೆಸಿದ್ದ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವತಿ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. 2013ರಲ್ಲಿ ಇದೇ ಶಾಲೆಯಲ್ಲಿ 10ನೇ ತರಗತಿ ಓದಿದ್ದಳು. ಸದ್ಯ ಕೃತ್ಯ ಎಸಗಿದ ಆರೋಪಿಯನ್ನು ಬಂಧಿಸುವಂತೆ ಶಾಲಾ ವಿದ್ಯಾರ್ಥಿಗಳು ಆಗ್ರಹಿಸಿ ಪ್ರತಿಭಟನೆ ನಡೆಸಿದರು.

ಆ್ಯಸಿಡ್ ದಾಳಿ ಆರೋಪಿಯನ್ನು ಬಂಧಿಸುವಂತೆ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಆ್ಯಸಿಡ್ ದಾಳಿಕೋರ ನಾಗೇಶ್‌ನನ್ನು ಬಂಧಿಸಿ, ಗಲ್ಲುಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ಆಮ್‌ ಆದ್ಮಿ ಪಾರ್ಟಿಯು ನಗರದ ಕಾಮಾಕ್ಷಿಪಾಳ್ಯ ಪೊಲೀಸ್‌ ಠಾಣೆ ಮುಂಭಾಗ ಬೃಹತ್‌ ಪ್ರತಿಭಟನೆ ನಡೆಸಿತು. ಪ್ರತಿಭಟನೆಯ ನೇತೃತ್ವ ವಹಿಸಿದ್ದ ಎಎಪಿ ಮಹಿಳಾ ಘಟಕದ ಅಧ್ಯಕ್ಷೆ ಕುಶಲಸ್ವಾಮಿ ಅವರು ಮಾತನಾಡಿ, ರಾಜ್ಯಾದ್ಯಂತ ಗಂಭೀರ ಅಪರಾಧಗಳ ಪ್ರಮಾಣ ಏರಿಕೆಯಾಗುತ್ತಿರುವುದು ಆತಂಕಕಾರಿ ಎಂದರು.

ಅಸಮರ್ಥರು ಗೃಹಸಚಿವ ಹುದ್ದೆ ಅಲಂಕರಿಸಿರುವುದರಿಂದ ಜನರಿಗೆ ಕಾನೂನಿನ ಭಯವೇ ಇಲ್ಲದಾಗಿದೆ. ಆ್ಯಸಿಡ್ ದಾಳಿಕೋರ ನಾಗೇಶ್‌ನನ್ನು ಶೀಘ್ರವೇ ಬಂಧಿಸಬೇಕು ಹಾಗೂ ಗಲ್ಲುಶಿಕ್ಷೆಗೆ ಒಳಪಡಿಸಬೇಕು. ಉದ್ಯೋಗಿಗೆ ರಕ್ಷಣೆ ನೀಡುವಲ್ಲಿ ವಿಫಲರಾದ ಮುತ್ತೂಟ್‌ ಫೈನಾನ್ಸ್‌ ಕಂಪನಿಯ ಮಾಲೀಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಸರ್ಕಾರವು ತಡಮಾಡದೇ ಸಂತ್ರಸ್ತ ಯುವತಿಗೆ ಒಂದು ಕೋಟಿ ರೂಪಾಯಿ ಪರಿಹಾರ ವಿತರಿಸಬೇಕು ಎಂದು ಆಗ್ರಹಿಸಿದರು.

ಪೊಲೀಸ್‌ ಇಲಾಖೆಯ ಮೇಲೆ ಹಿಡಿತ ಸಾಧಿಸುವಲ್ಲಿ ಗೃಹ ಸಚಿವರು ಸಂಪೂರ್ಣ ವಿಫಲರಾಗಿದ್ದಾರೆ. ಘಟನೆ ನಡೆದು ಮೂರು ದಿನಗಳಾದರೂ ಆರೋಪಿಯನ್ನು ಬಂಧಿಸಲು ಪೊಲೀಸರಿಗೆ ಸಾಧ್ಯವಾಗದಿರುವುದು ನಾಚಿಕೆಗೇಡಿನ ಸಂಗತಿ. ಇದಕ್ಕೆ ಗೃಹ ಸಚಿವರ ನಿರ್ಲಕ್ಷ್ಯವೇ ಕಾರಣ. ಉದ್ಯೋಗಸ್ಥ ಮಹಿಳೆಯರ ರಕ್ಷಣೆಗಾಗಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಸರ್ಕಾರ ಕೈಗೊಳ್ಳಬೇಕು. ಮಹಿಳೆಯರು ಹಾಗೂ ಮಕ್ಕಳ ರಕ್ಷಣೆಗಾಗಿ ಹೆಚ್ಚಿನ ನಿಗಾ ವಹಿಸಬೇಕು ಎಂದು ಕುಶಲಸ್ವಾಮಿ ಒತ್ತಾಯಿಸಿದರು.

ಓದಿ:ಬೆಂಗಳೂರಲ್ಲಿ ವರುಣನ ಆರ್ಭಟ: ಜನಜೀವನ ಅಸ್ತವ್ಯಸ್ತ

Last Updated : May 1, 2022, 7:28 PM IST

For All Latest Updates

TAGGED:

ABOUT THE AUTHOR

...view details