ಬೆಂಗಳೂರು :ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಬೆಳ್ಳಂಬೆಳಗ್ಗೆ ಕಾರ್ಯಾಚರಣೆಗೆ ಇಳಿದಿದ್ದು, ಲಂಚಕೋರರಿಗೆ ಬಿಸಿ ಮುಟ್ಟಿಸಿದ್ದಾರೆ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ರಾಜಸ್ವ ನಿರೀಕ್ಷಕ ಹಾಗೂ ಚಿಕ್ಕಜಾಲ ಠಾಣೆಯ ಕಾನ್ಸ್ಟೇಬಲ್ವೊಬ್ಬರನ್ನು ಎಸಿಬಿ ಅಧಿಕಾರಿಗಳುರೆಡ್ ಹ್ಯಾಂಡ್ ಆಗಿ ಸೆರೆ ಹಿಡಿದಿದ್ದಾರೆ.
ಜಮೀನಿನ ಪ್ರಕರಣ ಸಂಬಂಧ ವ್ಯಾಜ್ಯ ಮಾಡಿಕೊಂಡಿದ್ದ ದೂರುದಾರನಿಂದ ₹5 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಆರ್ ಐ ಹನುಮಯ್ಯ ಹಾಗೂ ಜಮೀನಿನ ವಿಚಾರಕ್ಕೆ ಸಂಬಂಧಪಟ್ಟಂತೆ ರಕ್ಷಣೆ ನೀಡಲು ₹6 ಲಕ್ಷ ಹಣದ ಬೇಡಿಕೆ ಇಟ್ಟಿದ್ದ ಹೆಡ್ ಕಾನ್ಸ್ಟೇಬಲ್ ರಾಜು ಸೆರೆ ಸಿಕ್ಕ ಆರೋಪಿಗಳು.