ಬೆಂಗಳೂರು: ನಿರ್ಭಯಾ ಗ್ಯಾಂಗ್ ರೇಪ್ ಹಂತಕರನ್ನು ಗಲ್ಲಿಗೇರಿಸಿದ್ದಕ್ಕೆ ದೇಶಕ್ಕೆ ದೇಶವೇ ಸಂಭ್ರಮಾಚರಣೆಯಲ್ಲಿದ್ದರೆ, ಇತ್ತ ಕಡೆ ನವರಸ ನಾಯಕ ಜಗ್ಗೇಶ್ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ.
ಕೊಟ್ಟ ಮಾತು ಉಳಿಸಿಕೊಂಡ ಜಗ್ಗೇಶ್: ನಿರ್ಭಯಾ ಹಂತಕರ ಹ್ಯಾಂಗ್ಮನ್ಗೆ ಒಂದು ಲಕ್ಷ ದೇಣಿಗೆ!
ನಿರ್ಭಯಾ ಹಂತಕರನ್ನು ಗಲ್ಲಿಗೇರಿಸುವ ಹ್ಯಾಂಗ್ಮನ್ಗೆ ಒಂದು ಲಕ್ಷ ರೂಪಾಯಿ ದೇಣಿಗೆ ನೀಡುವುದಾಗಿ ನವರಸ ನಾಯಕ ಈ ಮೊದಲು ಘೋಷಿಸಿದ್ದರು. ಇದೀಗ ನಿರ್ಭಯಾ ಹಂತಕರನ್ನು ಗಲ್ಲಿಗೇರಿಸಲಾಗಿದ್ದು, ಕೊಟ್ಟ ಮಾತಿನಂತೆ ತಿಹಾರ್ ಜೈಲಿನ ಹ್ಯಾಂಗ್ಮನ್ ಹೆಸರಲ್ಲಿ ಜಗ್ಗೇಶ್ ಒಂದು ಲಕ್ಷ ರೂಪಾಯಿಯ ಚೆಕ್ ಬರೆದು ಟ್ವಿಟರ್ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ನಿರ್ಭಯಾ ಅತ್ಯಾಚಾರ ಅಪರಾಧಿಗಳನ್ನು ಗಲ್ಲಿಗೇರಿಸುವ ಹ್ಯಾಂಗ್ಮನ್ಗೆ ಒಂದು 1 ಲಕ್ಷ ರೂಪಾಯಿ ದೇಣಿಗೆ ನೀಡುವುದಾಗಿ ಇತ್ತೀಚೆಗೆ ನಟ ಜಗ್ಗೇಶ್ ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದರು. ಇದೀಗ ಕೊನೆಗೂ ನಿರ್ಭಯಾ ಹಂತಕರನ್ನು ನೇಣುಗಂಬಕ್ಕೇರಿಸಲಾಗಿದ್ದು, ನಟ ಜಗ್ಗೇಶ್ ತಾವು ಈ ಮೊದಲೇ ಹೇಳಿದಂತೆ 1 ಲಕ್ಷ ರೂಪಾಯಿಯ ಚೆಕ್ ಬರೆಯುವ ಮೂಲಕ ತಮ್ಮ ಮಾತನ್ನು ಉಳಿಸಿಕೊಂಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಜಗ್ಗೇಶ್, ಕೊಟ್ಟ ಮಾತಿನಂತೆ 1 ಲಕ್ಷ ರೂ. ನಿರ್ಭಯಾ ಹಂತಕರ ಹ್ಯಾಂಗ್ಮೆನ್ಗೆ ನನ್ನ ದೇಣಿಗೆ. ದೇವನೊಬ್ಬನಿರುವ ಅವ ಎಲ್ಲ ನೋಡುತಿರುವ! ಸತ್ಯದ ಹಾದಿಯಲ್ಲಿ ನಡೆದವಗೆ ಭಯವಿಲ್ಲಾ! ಅಸತ್ಯದ ಮಾರ್ಗಕ್ಕೆ ಶಿಕ್ಷೆ ತಪ್ಪೊಲ್ಲಾ!. ಈ ದಿನಕ್ಕೆ ಹಲ್ಲುಕಚ್ಚಿ ಎಂದು ಅಂತ್ಯ ದುಷ್ಟ ಕ್ರಿಮಿಗಳಿಗೆ ಎಂದು ಕಾಯುತ್ತಿದ್ದೆ!. ಸುದ್ದಿ ಕೇಳಲು ನಿದ್ರೆ ಮಾಡದೆ ಕಾದೆ! ಹರಿ ಓಂ. ಶುಭ ದಿನ ಎಂದು ಬರೆದುಕೊಂಡಿದ್ದಾರೆ.