ಕರ್ನಾಟಕ

karnataka

ETV Bharat / state

ಗಲಭೆ ಪೀಡಿತ ಪ್ರದೇಶಗಳಿಗೆ ಎಡಿಜಿಪಿ ಅಲೋಕ್ ಕುಮಾರ್​​ ಭೇಟಿ - DG Halli and KG Halli Police Station

ಡಿ.ಜಿ.ಹಳ್ಳಿ ಹಾಗೂ ಕೆ.ಜಿ.ಹಳ್ಳಿ ಪೊಲೀಸ್ ಠಾಣೆಗಳಿಗೆ ಎಡಿಜಿಪಿ ಅಲೋಕ್ ಕುಮಾರ್ ಅವರು ಭೇಟಿ ನೀಡಿ, ಘಟನೆ ಕುರಿತು ಮಾಹಿತಿ ಪಡೆದರು.

ಗಲಭೆ ನಡೆದ ಪ್ರದೇಶಗಳಿಗೆ ಎಡಿಜಿಪಿ ಅಲೋಕ್ ಕುಮಾರ್ ಭೇಟಿ
ಗಲಭೆ ನಡೆದ ಪ್ರದೇಶಗಳಿಗೆ ಎಡಿಜಿಪಿ ಅಲೋಕ್ ಕುಮಾರ್ ಭೇಟಿ

By

Published : Aug 12, 2020, 9:42 PM IST

ಬೆಂಗಳೂರು: ನಿನ್ನೆ ಗಲಭೆ ನಡೆದ ಪ್ರದೇಶಗಳಿಗೆ ಎಡಿಜಿಪಿ ಅಲೋಕ್ ಕುಮಾರ್ ಭೇಟಿ ನೀಡಿದ್ದಾರೆ.

ಡಿ.ಜಿ.ಹಳ್ಳಿ ಹಾಗೂ ಕೆ.ಜಿ.ಹಳ್ಳಿ ಪೊಲೀಸ್ ಠಾಣೆಗಳಿಗೆ ಹೋಗಿ ಕೆಎಸ್​​ಆರ್​ಪಿ ಸಿಬ್ಬಂದಿ ಬಳಿ ಘಟನೆ ಕುರಿತು ಮಾಹಿತಿ ಸಂಗ್ರಹಿಸಿದರು. ನಿಮ್ಮ ಬಳಿ ಮದ್ದುಗುಂಡುಗಳು ಎಷ್ಟಿವೆ..?, ಬುಲೆಟ್ ಪ್ರೂಫ್ ಜಾಕೆಟ್​​ಗಳನ್ನು ಸರಿಯಾಗಿ ಹಾಕಿಕೊಳ್ಳಿ. ಯಾವುದೇ ಕ್ಷಣದಲ್ಲಾದ್ರೂ ಏನೇ ಘಟಿಸಿದ್ರೂ ಎದುರಿಸಲು ಸಿದ್ಧರಾಗಿ ಎಂದು ಸೂಚನೆ ನೀಡಿದರು.

ಗಲಭೆ ಪೀಡಿತ ಪ್ರದೇಶಗಳಿಗೆ ಎಡಿಜಿಪಿ ಅಲೋಕ್ ಕುಮಾರ್​​ ಭೇಟಿ

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು‌ ಈಗ ತಾನೇ ಬೆಳಗಾವಿಯಿಂದ ಮರಳಿದ್ದೇನೆ. ಘಟನೆಯಲ್ಲಿ ಹಾನಿಯಾದ ವಾಹನ, ಸಿಬ್ಬಂದಿ ಕುರಿತು ಮಾಹಿತಿ ಪಡೆಯಲು ಬಂದಿದ್ದೇನೆ. ಘಟನೆಯ ಬಗ್ಗೆ ಮಾಹಿತಿ ಸಂಗ್ರಹಿಸಿದ್ದೇನೆ. ಕೆಎಸ್ಆರ್​ಪಿ ನಾಲ್ಕು ವಾಹನಗಳಿಗೆ ಹಾನಿಯಾಗಿದೆ, 15 ರಿಂದ 20 ಪೊಲೀಸ್ ಸಿಬ್ಬಂದಿ ಗಾಯಾಳುವಾಗಿದ್ದಾರೆ ಎಂದು ಮಾಹಿತಿ ನೀಡಿದರು.

ABOUT THE AUTHOR

...view details