ಬೆಂಗಳೂರು:ರಾಜ್ಯದಲ್ಲಿ ಇಂದಿನಿಂದ ಲೋಕಾಯುಕ್ತ ಅಧಿಕೃತವಾಗಿ ಆರಂಭವಾಗಿದ್ದು ಸಾರ್ವಜನಿಕರಿಂದ ಬರುವ ದೂರು ಸ್ವೀಕರಿಸಿ ಪ್ರಕರಣ ದಾಖಲಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಲೋಕಾಯುಕ್ತ ಎಡಿಜಿಪಿ ಪ್ರಶಾಂತ್ ಕುಮಾರ್ ಠಾಕೂರ್ ಆದೇಶ ಹೊರಡಿಸಿದ್ದಾರೆ.
ಹೈಕೋರ್ಟ್ ಆದೇಶದಂತೆ ಮೊದಲಿನಂತೆ ಲೋಕಾಯುಕ್ತ ಕಾರ್ಯ ನಿರ್ವಹಿಸಲಿದೆ. ಇದಕ್ಕೆ ಬೇಕಾದ ಎಲ್ಲ ರೀತಿಯ ಸಿದ್ದತೆ ಮಾಡಿಕೊಂಡಿರುವ ಲೋಕಾಯುಕ್ತ ಇನ್ಮುಂದೆ ಬರುವ ದೂರುಗಳನ್ನು ಸ್ವೀಕರಿಸಿ ಪ್ರಕರಣ ದಾಖಲಿಸಿಕೊಳ್ಳಬೇಕೆಂದು ಆಯಾ ವಿಭಾಗದ ಎಸ್ಪಿ, ಡಿವೈಎಸ್ಪಿ ಹಾಗೂ ಇನ್ಸ್ಪೆಕ್ಟರ್ಗಳಿಗೆ ಎಡಿಜಿಪಿ ಆದೇಶಿಸಿದ್ದಾರೆ.