ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಸಂತ್ರಸ್ತ ಯುವತಿ ಮತ್ತೊಂದು ವಿಡಿಯೋ ಹರಿಬಿಟ್ಟಿರುವ ಬಗ್ಗೆ ವಕೀಲ ಜಗದೀಶ್ ಪ್ರತಿಕ್ರಿಯಿಸಿದ್ದು, ನ್ಯಾಯಾಂಗ ವ್ಯವಸ್ಥೆ ದಿಕ್ಕು ತಪ್ಪಿಸುವ ಕೆಲಸವಾಗ್ತಿದೆ ಎಂದು ಕಿಡಿಕಾರಿದ್ದಾರೆ.
ನಾವು ಯುವತಿಗೆ ಎಲ್ಲ ರೀತಿಯಲ್ಲಿ ಬೆಂಬಲ ನೀಡುತ್ತಿದ್ದೇವೆ, ಎಸ್ಐಟಿಗೂ ಸಹಕಾರ ಕೊಡುತ್ತಿದ್ದೇವೆ. ಆದರೂ ಆರೋಪಿಯ ಬಗ್ಗೆ ತನಿಖೆಯಾಗುತ್ತಿಲ್ಲ. ವೈದ್ಯಕೀಯ ಪರೀಕ್ಷೆ, ದಾಖಲೆ ವಶಕ್ಕೆ ಪಡೆಯುವುದು, ಮಹಜರು ಹೇಳಿಕೆ ಇವೆಲ್ಲಾ ಬಾಕಿಯಿವೆ. ಇಂತಹ ಸಮಯದಲ್ಲಿ ಈ ರೀತಿ ಸುಳ್ಳು ಸುದ್ದಿ ಹಬ್ಬಿಸುವುದು ನ್ಯಾಯಾಲಯಕ್ಕೆ ಮತ್ತು ಯುವತಿಗೆ ಮಾಡುವ ಮೋಸವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಯುವತಿ ಮತ್ತೆ ಮತ್ತೆ ವಿಡಿಯೋ ಮಾಡಿ ಸ್ಪಷ್ಟೀಕರಣ ಕೊಡಬೇಕಾಗುತ್ತದೆ. ಇದರಿಂದ ಪ್ರಕರಣದ ಪ್ರಕರಣದ ತನಿಖೆಗೆ ಸಮಸ್ಯೆಯಾಗುತ್ತದೆ. ಆದರೆ, ನ್ಯಾಯಾಲಯದ ಮೇಲೆ ನಂಬಿಕೆ ಇಡೋಣ. ಯಾವುದೇ ವಿಚಾರವಿದ್ದರೂ ಮಾಧ್ಯಮದವರು ಪರಿಶೀಲನೆ ಮಾಡಿ ಪ್ರಸಾರ ಮಾಡಿ ಎಂದು ಮನವಿ ಮಾಡಿದರು.