ಬೆಂಗಳೂರು: ಏರ್ ಶೋ ಆಧುನಿಕ ತಂತ್ರಜ್ಞಾನದ 13ನೇ ಆವೃತ್ತಿಯ ಏರೋ ಇಂಡಿಯಾದಲ್ಲಿ ಪ್ರದರ್ಶನಕ್ಕೆ ಇರಲಿದ್ದು, ಇದು ಆತ್ಮ ನಿರ್ಭರ ಭಾರತ ಯೋಜನೆಗೆ ಪುಷ್ಠಿ ನೀಡಲಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ನಗರದ ಖಾಸಗಿ ಹೋಟೆಲ್ನಲ್ಲಿ ಏರೋ ಇಂಡಿಯಾ 2021ರ ಮುನ್ನ ನಡೆಸಿದ ಸಂವಾದದಲ್ಲಿ ರಾಜನಾಥ್ ಸಿಂಗ್, ಸಿಎಂ ಯಡಿಯೂರಪ್ಪಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ಕಾರಣ ಅವರ ಆಸಕ್ತಿ ಹಾಗೂ ಪಾಲುದಾರಿಕೆ ಮಹತ್ವದ್ದಾಗಿದೆ ಎಂದರು.
ಜಗತ್ತನ್ನು ಕೋವಿಡ್ ಮಹಾಮಾರಿ ಕಾಡುತ್ತಿದೆ. ಇದರ ನಡುವೆಯೂ ಇಂತಹ ದೊಡ್ಡ ಕಾರ್ಯಕ್ರಮ ನಡೆಸುತ್ತಿರುವುದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಯೋಜನೆಯಾದ ಆತ್ಮ ನಿರ್ಭರ ಭಾರತದಿಂದ ಮಾತ್ರ ಸಾಧ್ಯವಾಗಿರುವುದು ಎಂದು ಶ್ಲಾಘಿಸಿದರು. ಕರ್ನಾಟಕ ರಾಜ್ಯ ಸಾಫ್ಟ್ವೇರ್ ವಲಯದಲ್ಲಿ ಮುಂಚೂಣಿಯಲ್ಲಿದೆ. ರಾಜ್ಯದಲ್ಲಿ ನಡೆದ ಆವಿಷ್ಕಾರಗಳಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ಏರೋ ಇಂಡಿಯಾ ಕೇವಲ ಪ್ರಾರಂಭವಷ್ಟೇ, ಮುಂದಿನ ದಿನಗಳಲ್ಲಿ ಮತ್ತಷ್ಟು ದೊಡ್ಡ ಮಟ್ಟದಲ್ಲಿ ತೆರೆದುಕೊಳ್ಳಲಿದೆ ಎಂದು ರಾಜ್ನಾಥ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದರು.
ಓದಿ: ನಮ್ಮ ದೇಶದ ರಕ್ಷಣೆಗೆ ಇತರೆ ರಾಷ್ಟ್ರಗಳ ಮೇಲೆ ಅವಲಂಬನೆ ಆಗಲು ಸಾಧ್ಯವಿಲ್ಲ: ರಾಜನಾಥ್ ಸಿಂಗ್