ಬೆಂಗಳೂರು: ಮೂಲ ಬಿಜೆಪಿ ನಾಯಕರು ಹಾಗೂ ವಲಸಿಗ ಬಿಜೆಪಿ ನಾಯಕರು ಎಂದು ಭಾರತೀಯ ಜನತಾ ಪಕ್ಷದಲ್ಲಿ ಇಲ್ಲ. ಅಂತ ಭಿನ್ನಾಭಿಪ್ರಾಯವನ್ನು ಪಕ್ಷ ಯಾವತ್ತು ಮಾಡಿಲ್ಲ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ನಮ್ಮದು ಸಿದ್ಧಾಂತದ ಮೇಲೆ ನಡೆಯುವ ಪಕ್ಷ. ನಮ್ಮ ನಾಯಕರಾದ ಯಡಿಯೂರಪ್ಪನವರು ಸಮರ್ಥರಿದ್ದಾರೆ. ಫೆ. 6ರಂದು ಸಂಪುಟ ವಿಸ್ತರಣೆ ಮಾಡುವ ತೀರ್ಮಾನ ಕೈಗೊಂಡಿದ್ದಾರೆ. ಈ ಮೂಲಕ ಎಲ್ಲರನ್ನು ಸಮಾಧಾನ ಪಡಿಸುತ್ತಾರೆ ಎಂದು ಹೇಳಿದರು.