ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಇಳಿಕೆಯಾದ ಬೆನ್ನಲ್ಲೇ ಇದೀಗ ಎಲ್ಲ ಕಡೆ ಅನ್ಲಾಕ್ ಮಾಡಲಾಗಿದೆ. ನಿಧಾನವಾಗಿ ವಾಣಿಜ್ಯ ಚಟುವಟಿಕೆಗಳಿಗೆ ಅನುಮತಿ ನೀಡಲಾಗ್ತಿದ್ದು, ಇದೀಗ ರಾಜ್ಯಾದ್ಯಂತ ಇಂದಿನಿಂದ ಕಲ್ಯಾಣ ಮಂಟಪ ಆರಂಭಕ್ಕೂ ಅವಕಾಶ ಕೊಡಲಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ಸುಧಾಕರ್, ಅನ್ಲಾಕ್ ಆಗ್ತಿದ್ದಂತೆ ಕೆಲವು ಕಡೆ ಜನರು ಫೇಸ್ ಮಾಸ್ಕ್ ಧರಿಸದೇ ಓಡಾಡುತ್ತಿದ್ದಾರೆ. ಜನರು ಎಚ್ಚರಿಕೆಯಿಂದ ಇರಬೇಕು. ಇಂದಿನಿಂದ ಕಲ್ಯಾಣ ಮಂಟಪ, ಹೋಟೆಲ್ನಲ್ಲಿ ಸಮಾರಂಭ ನಡೆಸಲು ಅವಕಾಶ ಕಲ್ಪಿಸಲಾಗಿದೆ. ಬಹಳಷ್ಟು ಮಂದಿಗೆ ಮನೆಯಲ್ಲಿ ಮದುವೆ ಮಾಡಲು ಆಗೋದಿಲ್ಲ ಅಂತ ಸಿಎಂಗೆ ಮನವಿ ಬಂದಿದ್ದವು. ಆದರೆ, ಹಲವು ಕಡೆ ನಾನು ಗಮನಿಸಿದ ಹಾಗೇ, 500, 1000 ಮೀರಿ ಜನರು ಸೇರುತ್ತಿರುವುದು ಕಂಡು ಬಂದಿದೆ. ಈ ಕುರಿತು ಸಿಎಂ, ಮುಖ್ಯಕಾರ್ಯದರ್ಶಿಯವರೊಂದಿಗೆ ಮಾತನಾಡಿ, ಯಾವ ಜಿಲ್ಲೆಯಲ್ಲಿ ಈ ನಿಯಮ ಉಲ್ಲಂಘನೆ ಆಗುತ್ತೋ, ಅಲ್ಲಿ ಜಿಲ್ಲಾಡಳಿತದ ಜಿಲ್ಲಾಧಿಕಾರಿಗಳೇ ಹೊಣೆಗಾರಿಕೆ ಮಾಡುತ್ತೇವೆ ಎಂದು ಮಾಹಿತಿ ನೀಡಿದರು.