ಕರ್ನಾಟಕ

karnataka

ETV Bharat / state

ರಾಜ್ಯಕ್ಕೆ ಆಗಮಿಸಿದ ಅಮಿತ್ ಶಾ.. ಹೆಲಿಕಾಪ್ಟರ್​ನಲ್ಲಿ ಭದ್ರಾವತಿಗೆ ತೆರಳಿದ ಕೇಂದ್ರ ಗೃಹ ಸಚಿವ - ಅಮಿತ್ ಶಾ ಕರ್ನಾಟಕ ಪ್ರವಾಸ

Amit Sha arrived at HAL Airport
ಬೆಂಗಳೂರಿಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್​ ಶಾ

By

Published : Jan 16, 2021, 2:48 PM IST

Updated : Jan 16, 2021, 4:03 PM IST

14:44 January 16

ಹೆಲಿಕಾಪ್ಟರ್​ನಲ್ಲಿ ಭದ್ರಾವತಿಗೆ ತೆರಳಿದ ಅಮಿತ್ ಶಾ

ರಾಜ್ಯಕ್ಕೆ ಆಗಮಿಸಿದ ಅಮಿತ್ ಶಾ.

ಬೆಂಗಳೂರು:ಎರಡು ದಿನಗಳ ರಾಜ್ಯ ಪ್ರವಾಸಕ್ಕಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಂಗಳೂರಿಗೆ ಆಗಮಿಸಿದ್ದಾರೆ. ಹೆಚ್​ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅಮಿತ್ ಶಾ ಅವರನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವರಾದ ಸದಾನಂದ ಗೌಡ, ಪ್ರಹ್ಲಾದ ಜೋಶಿ ಸ್ವಾಗತಿಸಿದರು.

ಹೆಚ್​ಎಎಲ್ ವಿಮಾನ ನಿಲ್ದಾಣಕ್ಕೆ ವಾಯುಪಡೆ ವಿಮಾನದಲ್ಲಿ ಆಗಮಿಸಿದ ಶಾ, ವಿಮಾನ ನಿಲ್ದಾಣದಲ್ಲಿ ಮಧ್ಯಾಹ್ನದ ಭೋಜನ ಸೇವಿಸಿದರು. ಬಳಿಕ ವಾಯುಪಡೆ ಹೆಲಿಕಾಪ್ಟರ್​ನಲ್ಲಿ ಶಿವಮೊಗ್ಗದ ಭದ್ರಾವತಿಗೆ ಪ್ರಯಾಣ ಬೆಳೆಸಿದರು. ಅಮಿತ್ ಶಾ ಜೊತೆಯಲ್ಲಿ ಸಿಎಂ ಬಿಎಸ್​ವೈ ಕೇಂದ್ರ ಸಚಿವರಾದ ಸದಾನಂದ ಗೌಡ, ಪ್ರಹ್ಲಾದ ಜೋಶಿ ಸಹ ಪ್ರಯಾಣಿಸಿದರು.

ಭದ್ರಾವತಿಯಲ್ಲಿ ಕ್ಷಿಪ್ರ ಕಾರ್ಯಪಡೆ ಘಟಕ ಸ್ಥಾಪನೆಗೆ ಶಿಲಾನ್ಯಾಸ ನೆರವೇರಿಸಲಿರುವ ಅಮಿತ್ ಶಾ ನಂತರ ಬೆಂಗಳೂರಿಗೆ ಆಗಮಿಸಲಿದ್ದಾರೆ. ಸಂಜೆ 5:30 ಕ್ಕೆ ಹೆಚ್​ಎಎಲ್​ಗೆ ಆಗಮಿಸಲಿರುವ ಅಮಿತ್ ಶಾ ಅವರನ್ನು ಮೆರವಣಿಗೆ ಮೂಲಕ ವಿಧಾನಸೌಧಕ್ಕೆ ಕರೆ ತರಲಾಗುತ್ತದೆ‌. ಅಮಿತ್ ಶಾ ಸ್ವಾಗತಕ್ಕೆ ವಿಧಾನಸೌಧ ತಯಾರಾಗಿದ್ದು, ನಾಲ್ಕು ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ.

ವಿಧಾನಸೌಧದ ಮೆಟ್ಟಿಲುಗಳ ಮೇಲೆ ಮೊದಲ ಕಾರ್ಯಕ್ರಮವಾಗಿ ಇ - ಆರ್​ಎಸ್​ಎಸ್ ವಾಹನಗಳಿಗೆ ಚಾಲನೆ ನೀಡಲಿರುವ ಶಾ ನಂತರ ಪೊಲೀಸ್ ವಸತಿ ಗೃಹಗಳ ಉದ್ಘಾಟನೆ ಮಾಡಲಿದ್ದಾರೆ. ಬ್ಯಾಂಕ್ವೆಟ್ ಹಾಲ್​ನಲ್ಲಿ ವರ್ಚುಯಲ್​ ಮೂಲಕ ವಸತಿ ಗ್ರಹಗಳ ಉದ್ಘಾಟನೆ ಮಾಡಲಿದ್ದಾರೆ. ಬಳಿಕ ಪೊಲೀಸ್ ಗೃಹ ನಿರ್ಮಾಣ - 2025 ಉದ್ಘಾಟನೆ, ಇಂಡಿಯಾ ರಿಸರ್ವ್​ ಬೆಟಾಲಿಯನ್ ಉದ್ಘಾಟನೆ ನೆರವೇರಿಸಲಿದ್ದಾರೆ.

ಇದನ್ನೂ ಓದಿ: ಸಚಿವ ಸ್ಥಾನ‌ ಸಿಗದಿರುವುದಕ್ಕೆ ಬೇಸರವಿಲ್ಲ: ಕರುಣಾಕರ ರೆಡ್ಡಿ ಸ್ಪಷ್ಟನೆ

Last Updated : Jan 16, 2021, 4:03 PM IST

ABOUT THE AUTHOR

...view details