ಕರ್ನಾಟಕ

karnataka

By

Published : Jul 4, 2022, 5:45 PM IST

Updated : Jul 4, 2022, 7:44 PM IST

ETV Bharat / state

ಪಿಎಸ್ಐ ನೇಮಕಾತಿ ಹಗರಣ, ಸಿಐಡಿಗೆ ಮುಕ್ತ ಅವಕಾಶ ನೀಡಿದ್ದರಿಂದ ಅಮೃತ್ ಪೌಲ್ ಬಂಧನ: ಸಿಎಂ ಬೊಮ್ಮಾಯಿ

ಎಡಿಜಿಪಿ ಅಮೃತ್ ಪೌಲ್ ಮತ್ತು ಬೆಂಗಳೂರು ಡಿಸಿಯಾಗಿದ್ದ ಮಂಜುನಾಥ್ ಬಂಧನದ ಬಗ್ಗೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.

amrit-paul-was-arrested-because-of-cid-investigation
ಸಿಐಡಿಗೆ ಮುಕ್ತ ಅವಕಾಶ ನೀಡಿದ್ದರಿಂದ ಅಮೃತ್ ಪೌಲ್ ಬಂಧನ: ಸಿಎಂ ಬೊಮ್ಮಾಯಿ

ಬೆಂಗಳೂರು:ಪಿಎಸ್ಐ ನೇಮಕಾತಿ ಹಗರಣದ ತನಿಖೆ ನಡೆಸಲು ಸಿಐಡಿಗೆ ಸರ್ಕಾರ ಮುಕ್ತ ಅವಕಾಶ ನೀಡಿದ್ದರಿಂದಾಗಿ ಅಕ್ರಮ ಆರೋಪ ಸಂಬಂಧ ಎಡಿಜಿಪಿ ಅಮೃತ್ ಪಾಲ್ ಅವರನ್ನು ಬಂಧಿಸಲಾಗಿದೆ. ನಿಷ್ಪಕ್ಷಪಾತ ತನಿಖೆ ನಡೆಸಿ ಎಲ್ಲ ಆರೋಪಿಗಳನ್ನೂ ಬಂಧಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಕಬ್ಬನ್ ಪಾರ್ಕ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಐಡಿಗೆ ಸರ್ಕಾರ ಮುಕ್ತವಾದ ಅವಕಾಶ ನೀಡಿದೆ. ಹೀಗಾಗಿ ಸಾಕ್ಷ್ಯಾಧಾರಗಳ ಮೇಲೆ ಪೊಲೀಸರು ಕ್ರಮ ಕೈಗೊಳ್ಳುತ್ತಿದ್ದಾರೆ. ಪ್ರಕರಣದಲ್ಲಿ ಎಷ್ಟೇ ದೊಡ್ಡವರು ಭಾಗಿಯಾಗಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ನಾನು ಈ ಮೊದಲೇ ಹೇಳಿದ್ದೆ. ನಮ್ಮ ಸರ್ಕಾರವಾಗಿರುವ ಕಾರಣ ಎಡಿಜಿಪಿ ಹುದ್ದೆಯಲ್ಲಿನ ಹಿರಿಯ ಅಧಿಕಾರಿಯನ್ನು ಬಂಧಿಸಿ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಸಿಐಡಿಗೆ ಮುಕ್ತ ಅವಕಾಶ ನೀಡಿದ್ದರಿಂದ ಅಮೃತ್ ಪೌಲ್ ಬಂಧನ: ಸಿಎಂ ಬಸವರಾಜ ಬೊಮ್ಮಾಯಿ

ಎಡಿಜಿಪಿ ಬಂಧನದಿಂದ ಸರ್ಕಾರಕ್ಕೆ ಮುಜುಗರವಾಗುವ ಪ್ರಶ್ನೆ ಉದ್ಭವವಾಗುವುದಿಲ್ಲ. ತನಿಖೆ ಮಾಡಿಸಿದ್ದೇ ನಾವು, ಅದೇ ಬೇರೆ ಸರ್ಕಾರ ಇದ್ದಿದ್ದರೆ ಹೀಗಾಗುತ್ತಿರಲಿಲ್ಲ. ಈ ಹಿಂದೆ ಪೊಲೀಸ್ ನೇಮಕಾತಿಯಲ್ಲಿ ಅಕ್ರಮ ಆರೋಪ ಕೇಳಿಬಂದಾಗ ಯಾವುದೇ ತನಿಖೆ ಆಗಿರಲಿಲ್ಲ. ಆದರೆ ನಾವು ನಿಷ್ಪಕ್ಷಪಾತವಾಗಿ, ನಿರ್ದಾಕ್ಷಿಣ್ಯವಾಗಿ ತನಿಖೆ ನಡೆಸುತ್ತಿದ್ದೇವೆ. ಅಕ್ರಮ ಪ್ರಕರಣದಲ್ಲಿ ಭಾಗಿಯಾದ ಎಲ್ಲರನ್ನೂ ಬಂಧಿಸುತ್ತೇವೆ ಎಂದು ಸಿಎಂ ಖಡಕ್​ ಸಂದೇಶ ರವಾನಿಸಿದರು.

ಓದಿ :ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ: ಹಿರಿಯ ಐಪಿಎಸ್ ಅಧಿಕಾರಿಯೇ ಅರೆಸ್ಟ್​

ಮುಲಾಜಿಲ್ಲದೆ ಕ್ರಮ: ಅಕ್ರಮ ಆರೋಪ ಪ್ರಕರಣಗಳಲ್ಲಿ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದ ಐಎಎಸ್ ಅಧಿಕಾರಿ ಜಿ.ಮಂಜುನಾಥ್‌ ಅವರನ್ನು ಎಸಿಬಿ ಬಂಧಿಸಿದ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟೀಕರಣ ನೀಡಿದ್ದಾರೆ.

ಬೆಂಗಳೂರು ನಗರದ ಹಿಂದಿನ ಜಿಲ್ಲಾಧಿಕಾರಿ ಜೆ ಮಂಜುನಾಥ್ ಅವರನ್ನು ಭ್ರಷ್ಟಾಚಾರದ ಆರೋಪ ಪ್ರಕರಣದಲ್ಲಿ ಎಸಿಬಿ ಪೊಲೀಸರು ಬಂಧಿಸಿದ್ದಾರೆ. ಯಾವುದೇ ತನಿಖೆ ಇದ್ದರೂ ಕಾನೂನಿನ ಪ್ರಕಾರವೇ‌ ನಡೆಯುತ್ತದೆ. ಈ‌ ಮಾತನ್ನು ನಾನು ಆಗಲೇ ಹೇಳಿದ್ದೇನೆ. ಯಾರ ಬಗ್ಗೆಯೂ ಮುಲಾಜಿಲ್ಲ, ಯಾವ ಹಂತದಲ್ಲಿ ಸಾಕ್ಷಿ ಆಧಾರ ಇಟ್ಟುಕೊಂಡು ಕ್ರಮ ತಗೆದುಕೊಳ್ಳಬೇಕೋ ಆ ಕೆಲಸವನ್ನು ತನಿಖಾಧಿಕಾರಿಗಳು ಮಾಡುತ್ತಿದ್ದಾರೆ, ವಿಶೇಷವಾಗಿ ಕರ್ನಾಟಕದಲ್ಲಿ ಈ ರೀತಿಯ ಕ್ರಮ ಆಗುತ್ತಿದೆ ಎಂದರು.

Last Updated : Jul 4, 2022, 7:44 PM IST

ABOUT THE AUTHOR

...view details