ಬೆಂಗಳೂರು: ಬೆಂಗಳೂರಿನ ಡಿ.ಜಿ.ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣ ಸಂಬಂಧ ಮತ್ತೊಬ್ಬ ಆರೋಪಿ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾನೆ. ಈ ಮೂಲಕ ಗಲಭೆಯಿಂದ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿದೆ.
ಡಿ.ಜಿ. ಹಳ್ಳಿ ನಿವಾಸಿಯಾಗಿದ್ದ ನದೀಂ ಮೃತಪಟ್ಟ ಆರೋಪಿ ಎಂದು ತಿಳಿದು ಬಂದಿದೆ. ಕಳೆದ ಮಂಗಳವಾರ ನಡೆದ ಗಲಭೆಯಲ್ಲಿ ನದೀಂ ಭಾಗಿಯಾಗಿ ಕಲ್ಲು ತೂರಾಟ ನಡೆಸಿದ್ದ ಎನ್ನುವುದು ಮೇಲ್ನೊಟಕ್ಕೆ ಗೊತ್ತಾಗಿತ್ತು. ಕಾನೂನು ಕೈಗೆತ್ತಿಕೊಂಡ ಪುಂಡರ ಮೇಲೆ ಪೊಲೀಸರು ಗಲಭೆ ಹತ್ತಿಕ್ಕಲು ಗೋಲಿಬಾರ್ ನಡೆಸಿದ್ದರು. ಈ ವೇಳೆ ಮೂವರು ಮೃತಪಟ್ಟಿದ್ದು ಹಲವರು ಗಾಯಗೊಂಡಿದ್ದರು.