ಕರ್ನಾಟಕ

karnataka

By

Published : Oct 17, 2022, 7:53 AM IST

ETV Bharat / state

ದೀಪಾವಳಿ ಪ್ರಯುಕ್ತ ಪಟಾಕಿ ಮಾರಾಟ ಮಳಿಗೆ ತೆರೆಯಲು ಅರ್ಜಿ ಆಹ್ವಾನ

ದೀಪಾವಳಿ ಹಬ್ಬದ ಪ್ರಯುಕ್ತ ಬಿಬಿಎಂಪಿ ಮೈದಾನಗಳಲ್ಲಿ ತಾತ್ಕಾಲಿಕ ಚಿಲ್ಲರೆ ಪಟಾಕಿ ಮಾರಾಟ ಮಳಿಗೆ ತೆರೆಯಲು ಆಸಕ್ತ ಸಾರ್ವಜನಿಕರಿಗೆ ಅರ್ಜಿ ಆಹ್ವಾನಿಸಲಾಗಿದೆ.

firecracker
ಪಟಾಕಿ ಮಾರಾಟ ಮಳಿಗೆ

ಬೆಂಗಳೂರು: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಬಿಬಿಎಂಪಿ ಮೈದಾನಗಳಲ್ಲಿ ತಾತ್ಕಾಲಿಕ ಚಿಲ್ಲರೆ ಪಟಾಕಿ ಮಾರಾಟ ಮಳಿಗೆ ತೆರೆಯಲು ಆಸಕ್ತ ಸಾರ್ವಜನಿಕರಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಸೇವಾ ಸಿಂಧು ಅಥವಾ ಆನ್‌ಲೈನ್ ಮುಖಾಂತರ ಬೆಂಗಳೂರು ಒನ್ ಕೇಂದ್ರಗಳಲ್ಲಿ ಅ.17 ರಿಂದ 18 ರವರೆಗೆ ಸಂಜೆ 5.30 ರೊಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಪ್ರಕ್ರಿಯೆ ಶುಲ್ಕವಾಗಿ 5 ಸಾವಿರ ರೂ. ಮೊತ್ತವನ್ನು ಆನ್‌ಲೈನ್‌ನಲ್ಲಿ ಪಾವತಿಸಬೇಕು. ಡೆಪ್ಯೂಟಿ ಕಮಿಷನರ್ ಆಫ್ ಪೊಲೀಸ್, ಅಡ್ಮಿನಿಸ್ಟ್ರೇಷನ್ ಬೆಂಗಳೂರು ಸಿಟಿ ಹೆಸರಿನಲ್ಲಿ 25 ಸಾವಿರ ರೂ.ಗೆ ಡಿಡಿ ಪಡೆದು, ಆ ಡಿಡಿ ಪ್ರತಿಯನ್ನು ಆನ್‌ಲೈನ್ ಪೋರ್ಟಲ್‌ನಲ್ಲಿ ಅಪ್ಲೋಡ್ ಮಾಡಬೇಕು. ಡಿಜಿಪಿ ಮತ್ತು ಡಿಜಿ ಕರ್ನಾಟಕ ಫೈರ್ ಆ್ಯಂಡ್ ಎಮರ್ಜನ್ಸಿ ಸರ್ವಿಸಸ್ ಬೆಂಗಳೂರು ಹೆಸರಿನಲ್ಲಿ 5 ಸಾವಿರ ರೂ.ಗೆ ಡಿಡಿ ಪಡೆದು ಪೋರ್ಟಲ್‌ನಲ್ಲಿ ಅಪ್ಲೋಡ್ ಮಾಡಬೇಕು. ಡಿಡಿಯಲ್ಲಿ ಅರ್ಜಿದಾರರ ಹೆಸರು ಹೊರತುಪಡಿಸಿ ಬೇರೆಯವರ ಹೆಸರಿದ್ದಲ್ಲಿ ಅಂತಹ ಡಿಡಿ ಪರಿಗಣಿಸುವುದಿಲ್ಲ.

ಇದನ್ನೂ ಓದಿ:ದೀಪಾವಳಿಗೆ ಸಿದ್ಧಗೊಂಡಿವೆ ಪರಿಸರ ಸ್ನೇಹಿ ಪಟಾಕಿಗಳು: ಮಂಗಳೂರಿನ ನಿತಿನ್​ ವಾಸ್​ರಿಂದ ತಯಾರಿ

ಅರ್ಜಿದಾರರ ಪಾಸ್‌ಪೋರ್ಟ್ ಸೈಜ್ ಫೋಟೋ, ವಾಸಸ್ಥಳದ ಬಗ್ಗೆ ಆಧಾರ್ ಕಾರ್ಡ್ ಅಥವಾ ಮತದಾರರ ಗುರುತಿನ ಚೀಟಿಯ ಜೆರಾಕ್ಸ್ ಪ್ರತಿಯನ್ನು ಸ್ವಯಂ ದೃಢೀಕರಿಸಿ ಅಪ್ಲೋಡ್ ಮಾಡಬೇಕು. ನಂತರ ಅರ್ಜಿ ಸಂಖ್ಯೆಯೊಂದಿಗೆ ಡಿಡಿ ಸೇರಿದಂತೆ ಅಗತ್ಯ ದಾಖಲೆಗಳನ್ನು ಅ.18ರ ಸಂಜೆ 7.30ರೊಳಗೆ ಖುದ್ದು ಕಚೇರಿಗೆ ಸಲ್ಲಿಸಬೇಕು. ಅನುಮತಿ ಬೇಕಾದ ಮೈದಾನಗಳ ಮಾಹಿತಿಯನ್ನು ನಗರ ಪೊಲೀಸ್ ಆಯುಕ್ತರ ಕಚೇರಿ ಪ್ರಕಟಣಾ ಫಲಕ ಅಥವಾ ಪೊಲೀಸ್ ಆಯುಕ್ತರ ಕಚೇರಿಯ ಅಂತರ್ಜಾಲದಲ್ಲಿ ಪಡೆಯಬಹುದು.

ಇದನ್ನೂ ಓದಿ:ಹುಬ್ಬಳ್ಳಿ: ದೀಪಾವಳಿ, ಕಾರ್ತಿಕ ಮಾಸದ ಮೆರುಗು ಹೆಚ್ಚಿಸಿದ ಆಕಾಶ ಬುಟ್ಟಿ- Watch Video

ಅ.20 ರಂದು ಬೆಳಗ್ಗೆ 11 ಗಂಟೆಗೆ ಮೈಸೂರು ರಸ್ತೆಯ ಸಿಎಆರ್ ಕೇಂದ್ರಸ್ಥಾನದ ಆವರಣದಲ್ಲಿ ಸಾರ್ವಜನಿಕರ ಸಮ್ಮುಖದಲ್ಲಿ ಲಾಟರಿ ಪ್ರಕ್ರಿಯೆ ನಡೆಸಿ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080 22942373, 080 22943553 ಅಥವಾ 080 22942358 ಗೆ ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ABOUT THE AUTHOR

...view details