ಬೆಂಗಳೂರು: ಕುಂದಾನಗರಿ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಮುಗಿದ ಬೆನ್ನಲ್ಲೇ ವಿಧಾನಮಂಡಲದ ವಿವಿಧ ಸ್ಥಾಯಿ ಸಮಿತಿಗಳ ರಚನೆ ಮಾಡಲಾಗಿದ್ದು, ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅಧ್ಯಕ್ಷತೆಯಲ್ಲಿ ಸಾರ್ವಜನಿಕ ಲೆಕ್ಕಪತ್ರ ಸಮಿತಿ, ಬಿಜೆಪಿ ರೆಬೆಲ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅಧ್ಯಕ್ಷತೆಯಲ್ಲಿ ಹಕ್ಕುಬಾಧ್ಯತೆಗಳ ಸಮಿತಿ ಸೇರಿ ಹಲವು ಸಮಿತಿಗಳನ್ನು ರಚಿಸಲಾಗಿದೆ.
2021-22ನೇ ಸಾಲಿನ ವಿಧಾನಮಂಡಲದ ವಿವಿಧ ಸ್ಥಾಯಿ ಸಮಿತಿಗಳ ರಚನೆ ಮಾಡಲಾಗಿದೆ. 9 ಜಂಟಿ ಸಮಿತಿಗಳು ಹಾಗೂ 6 ವಿಧಾನಸಭೆಯ ಸಮಿತಿಗಳನ್ನು ರಚಿಸಿ ವಿಧಾನಸಭೆ ಕಾರ್ಯದರ್ಶಿ ಎಂ.ಕೆ ವಿಶಾಲಾಕ್ಷಿ ಆದೇಶ ಹೊರಡಿಸಿದ್ದಾರೆ.
ಜಂಟಿ ಸಮಿತಿಗಳು:
ವಿಧಾನಮಂಡಲದ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಗೆ ರಮೇಶ್ ಕುಮಾರ್ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ವಿಧಾನಸಭೆಯ 15 ಸದಸ್ಯರು ಮತ್ತು ವಿಧಾನಪರಿಷತ್ತಿನ 5 ಸದಸ್ಯರು ಸಮಿತಿಗೆ ಸದಸ್ಯರಾಗಿದ್ದಾರೆ.
ಶಾಸಕ ಜಿಎಚ್ ತಿಪ್ಪಾರೆಡ್ಡಿ ಅಧ್ಯಕ್ಷತೆಯಲ್ಲಿ ಸಾರ್ವಜನಿಕ ಉದ್ಯಮಗಳ ಸಮಿತಿ ರಚಿಸಲಾಗಿದ್ದು, ವಿಧಾನಸಭೆಯ 15 ಸದಸ್ಯರು ಮತ್ತು ವಿಧಾನಪರಿಷತ್ತಿನ 5 ಸದಸ್ಯರು ಸಮಿತಿಗೆ ಸದಸ್ಯರನ್ನಾಗಿ ನೇಮಿಸಲಾಗಿದೆ.
ಶಾಸಕ ಎಂ ಪಿ ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಅನುಸೂಚಿತ ಜಾತಿ ಹಾಗೂ ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿ ರಚಿಸಲಾಗಿದ್ದು, ವಿಧಾನಸಭೆಯ 15 ಸದಸ್ಯರು ಮತ್ತು ವಿಧಾನಪರಿಷತ್ತಿನ 5 ಸದಸ್ಯರು ಸಮಿತಿಗೆ ಸದಸ್ಯರನ್ನಾಗಿ ನೇಮಿಸಲಾಗಿದೆ.
ಶಾಸಕ ಕುಮಾರ್ ಬಂಗಾರಪ್ಪ ಅಧ್ಯಕ್ಷತೆಯಲ್ಲಿ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ ರಚಿಸಲಾಗಿದ್ದು, ವಿಧಾನಸಭೆಯ 15 ಸದಸ್ಯರು ಮತ್ತು ವಿಧಾನಪರಿಷತ್ತಿನ 5 ಸದಸ್ಯರು ಸಮಿತಿಗೆ ಸದಸ್ಯರನ್ನಾಗಿ ನೇಮಿಸಲಾಗಿದೆ.
ಶಾಸಕ ರವಿ ಸುಬ್ರಮಣ್ಯ ಅಧ್ಯಕ್ಷತೆಯಲ್ಲಿ ಅಧೀನ ಶಾಸನ ರಚನಾ ಸಮಿತಿ ರಚಿಸಲಾಗಿದ್ದು, ವಿಧಾನಸಭೆಯ 15 ಸದಸ್ಯರು ಮತ್ತು ವಿಧಾನಪರಿಷತ್ತಿನ 5 ಸದಸ್ಯರು ಸಮಿತಿಗೆ ಸದಸ್ಯರನ್ನಾಗಿ ನೇಮಿಸಲಾಗಿದೆ.