ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ಶಾಸಕ ರಾಮಲಿಂಗಾರೆಡ್ಡಿ ಮತ್ತು ಮಾಜಿ ಸಂಸದ ಆರ್. ಧ್ರುವನಾರಾಯಣ ಅವರನ್ನು ನೇಮಿಸಿ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಆದೇಶ ಹೊರಡಿಸಿದ್ದಾರೆ.
ಈಗಾಗಲೇ ಮೂವರು ಕಾರ್ಯಾಧ್ಯಕ್ಷರಿದ್ದು, ಇದೀಗ ಮತ್ತಿಬ್ಬರನ್ನು ಆ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ. ಒಟ್ಟಿನಲ್ಲಿ ಕೆಪಿಸಿಸಿ ಓರ್ವ ಅಧ್ಯಕ್ಷರು ಹಾಗೂ ಐವರು ಕಾರ್ಯಾಧ್ಯಕ್ಷರನ್ನು ಹೊಂದಿದೆ. ಡಿ.ಕೆ. ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಿಸಿದ ನಂತರ, ಕಾರ್ಯಾಧ್ಯಕ್ಷರನ್ನಾಗಿ ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ ಹಾಗೂ ಸಲೀಂ ಮಹಮದ್ರನ್ನ ನೇಮಿಸಿ ಸೋನಿಯಾಗಾಂಧಿ ಆದೇಶ ಹೊರಡಿಸಿದ್ದರು.