ಕರ್ನಾಟಕ

karnataka

ETV Bharat / state

ಆರಗ ಜ್ಞಾನೇಂದ್ರ ಗೃಹಸಚಿವ ಹುದ್ದೆಯಲ್ಲಿರಲು ನಾಲಾಯಕ್: ಕೈ ಶಾಸಕ ಅಬ್ಬಯ್ಯ ಪ್ರಸಾದ್

ಹುಬ್ಬಳ್ಳಿ ಘಟನೆಯಲ್ಲಿ ಕಾಂಗ್ರೆಸ್ ಡಬಲ್ ಸ್ಯ್ಟಾಂಡ್ ಎಂದು ಆರಗ ಜ್ಞಾನೇಂದ್ರ ಆರೋಪ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಶಾಸಕ ಅಬ್ಬಯ್ಯ ಪ್ರಸಾದ್, ಮಾಹಿತಿ ಕೊರತೆಯಿರುವ ಆರಗ ಜ್ಞಾನೇಂದ್ರ ಗೃಹಸಚಿವ ಹುದ್ದೆಯಲ್ಲಿ ಇರಲು ನಾಲಾಯಕ್ ಎಂದರು.

By

Published : Apr 22, 2022, 4:54 PM IST

Abbayya Prasad
ಅಬ್ಬಯ್ಯ ಪ್ರಸಾದ್

ಬೆಂಗಳೂರು: ಮಾಹಿತಿ ಕೊರತೆಯಿರುವ ಆರಗ ಜ್ಞಾನೇಂದ್ರ ಹೋಮ್​​ ಮಿನಿಸ್ಟರ್ ಹುದ್ದೆಯಲ್ಲಿ ಇರಲು ನಾಲಾಯಕ್ ಎಂದು ಹುಬ್ಬಳ್ಳಿ- ಧಾರವಾಡ ಪೂರ್ವ ಕಾಂಗ್ರೆಸ್ ಶಾಸಕ ಅಬ್ಬಯ್ಯ ಪ್ರಸಾದ್ ಹೇಳಿದ್ದಾರೆ. ಹುಬ್ಬಳ್ಳಿ ಘಟನೆಯಲ್ಲಿ ಕಾಂಗ್ರೆಸ್ ಡಬಲ್ ಸ್ಯ್ಟಾಂಡ್ ಎಂದು ಸಚಿವರು ಆರೋಪ ಮಾಡಿದ್ದರು. ಈ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಹೋಮ್ ಮಿನಿಸ್ಟರ್​​ಗೆ ಮಾಹಿತಿ ಕೊರತೆಯಿದೆ ಎಂದು ಹೇಳಿದರು.

ಇದನ್ನೂ ಓದಿ:ಪಿಎಸ್ಐ ನೇಮಕಾತಿ ಅಕ್ರಮ: ಮತ್ತೋರ್ವ ಕಾಂಗ್ರೆಸ್‌ ಮುಖಂಡನ ಬಂಧಿಸಿದ ಸಿಐಡಿ

ಗದ್ದಲ ಗಲಾಟೆಯಿಂದಲೇ ರಾಜಕೀಯ ಲಾಭ ಪಡೆಯುವುದು ಬಿಜೆಪಿಯ ತಂತ್ರ. ಎಸ್​​ಡಿಪಿಐ, ಪಿಎಫ್ಐ ಬ್ಯಾನ್ ಮಾಡಿ ಎಂದು ಕಾಂಗ್ರೆಸ್ ಒತ್ತಾಯ ಮಾಡ್ತಿದೆ. ಜಾತಿ, ಧರ್ಮಗಳ ಮೇಲಿನ ರಾಜಕೀಯ ಲಾಭ ಬಿಜೆಪಿಗೆ ಬೇಕು. ಚುನಾವಣೆ ವೇಳೆ ಮಾತನಾಡಲು ಇವರ ಬಳಿ ಏನೂ ಇಲ್ಲ. ಹೀಗಾಗಿ ಕೋಮು ಗಲಭೆ ಮಾಡಿಸಿ ಅದರ ಲಾಭ ಪಡೆಯಲು ಮುಂದಾಗಿದ್ದಾರೆ. ಅಭಿವೃದ್ಧಿ ಬಗ್ಗೆ ಚರ್ಚೆ ಇವರಿಗೆ ಬೇಡ ಎಂದು ಟೀಕಿಸಿದರು.

For All Latest Updates

TAGGED:

ABOUT THE AUTHOR

...view details