ಕರ್ನಾಟಕ

karnataka

ETV Bharat / state

ಆರೋಗ್ಯ ಬಂಧು ಯೋಜನೆಯ ಪರಿಷ್ಕೃತ ಮಾರ್ಗಸೂಚಿ ಪ್ರಕಟಸಿದ ರಾಜ್ಯ ಸರ್ಕಾರ - ಈಟಿವಿ ಭಾರತ ಕರ್ನಾಟಕ

ಆರೋಗ್ಯ ಬಂಧು ಯೋಜನೆಯನ್ನು ಪರಿಷ್ಕೃತ ಮಾರ್ಗಸೂಚಿಗಳೊಂದಿಗೆ ಮುಂದುವರೆಸುವ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ

arogya-bandhu-yojana-revised-guidelines-published
ಆರೋಗ್ಯ ಬಂಧು ಯೋಜನೆಯ ಪರಿಷ್ಕೃತ ಮಾರ್ಗಸೂಚಿ ಪ್ರಕಟ

By

Published : May 30, 2023, 9:56 PM IST

ಬೆಂಗಳೂರು:ಆರೋಗ್ಯ ಬಂಧು ಯೋಜನೆಯನ್ನು ಪರಿಷ್ಕೃತ ಮಾರ್ಗಸೂಚಿಗಳೊಂದಿಗೆ ಮುಂದುವರೆಸುವ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರಿ ಆದೇಶದಲ್ಲಿ ಆರೋಗ್ಯ ಬಂಧು ಯೋಜನೆಯಡಿ ಅರ್ಹತಾ ಮಾನದಂಡಗಳನ್ನು ಪೂರೈಸಿರುವ 12 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮಾತ್ರ ಮುಂದುವರೆಸುವಂತೆ ಹಾಗೂ ಉಳಿದ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಗುತ್ತಿಗೆ ಅವಧಿ ಮುಕ್ತಾಯಗೊಂಡ ತಕ್ಷಣ ಇಲಾಖೆಯ ವಶಕ್ಕೆ ಪಡೆದು ನಿರ್ವಹಿಸುವಂತೆ ಆದೇಶಿಸಲಾಗಿತ್ತು.

ರಾಜ್ಯ ಸರ್ಕಾರದ ಆದೇಶ

ಈಗಾಗಲೇ ಮುಂದುವರೆಸಲಾದ 12 ಹಾಗೂ ಹೆಚ್ಚುವರಿಯಾಗಿ 8 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು, ಒಟ್ಟು ಈ ಕೆಳಕಂಡ 20 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಪರಿಷ್ಕೃತ ಆರೋಗ್ಯ ಬಂಧು ಯೋಜನೆಯಡಿ ಹೊಸ ಮಾರ್ಗಸೂಚಿಯನ್ನು ಒಳಗೊಂಡಂತೆ ದಿನಾಂಕ 31-03-2023ರವರೆಗೆ ಮುಂದುವರೆಸಲು ಆದೇಶಿಸಲಾಗಿತ್ತು.

ಪರಿಷ್ಕೃತ ಮಾರ್ಗಸೂಚಿಗಳನ್ವಯ ಮೇಲ್ಕಾಣಿಸಿದ 19 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು, ತಾತ್ಕಲಿಕವಾಗಿ ದಿನಾಂಕ 21-07-2022ರ ಆದೇಶದಲ್ಲಿನ ಷರತ್ತುಗಳನ್ನು ಕಡ್ಡಾಯವಾಗಿ ಪಾಲಿಸುವ ಹಾಗೂ ಇಲಾಖೆಯಲ್ಲಿ ನೀಡುವಂತಹ ಗುತ್ತಿಗೆ ವೇತನಕ್ಕೆ ಸಮನಾದ ವೇತನ ಪಾವತಿಸುವ ಷರತ್ತಿಗೊಳಪಟ್ಟು ಮುಂದುವರೆಸಲು ನಿಯಮಾನುಸಾರ ಕ್ರಮಕೈಗೊಳ್ಳಲು ಸೂಚಿಸಲಾಗಿತ್ತು.

ರಾಜ್ಯ ಸರ್ಕಾರದ ಆದೇಶ

ಸರ್ಕಾರವು ಈ ಮೊದಲು ಮುಂದುವರೆಸಿರುವ 19 ಪ್ರಾಥಮಿಕ ಆರೋಗ ಕೇಂದ್ರಗಳನ್ನು ಪರಿಷ್ಕೃತ ಆರೋಗ್ಯ ಬಂಧು ಯೋಜನೆಯಡಿ 1 ತಿಂಗಳು ಅಂದರೆ ದಿನಾಂಕ 30-06-2023ರವರೆಗೆ ಮುಂದುವರೆಸಲು ಅನುಮೋದನೆ ನೀಡಲಾಗಿದೆ. ಅದ್ದರಿಂದ 19 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಪರಿಷ್ಕೃತ ಆರೋಗ್ಯ ಬಂಧು ಯೋಜನೆಯಡಿ ಒಂದು ತಿಂಗಳು ಅಂದರೆ ದಿನಾಂಕ 30-06-2023ರವರೆಗೆ, ಹಿಂದಿನ ಆದೇಶದಲ್ಲಿರುವ ಷರತ್ತುಗಳನ್ನು ಕಡ್ಡಾಯವಾಗಿ ಪಾಲಿಸುವ ಹಾಗೂ ಇಲಾಖೆಯಲ್ಲಿ ನೀಡುವಂತಹ ಗುತ್ತಿಗೆ ವೇತನಕ್ಕೆ ಸಮನಾದ ವೇತನ ಪಾವತಿಸುವ ಷರತ್ತಿಗೊಳಪಟ್ಟು, ಮುಂದುವರೆಸಲು ನಿಯಮಾನುಸಾರ ಕ್ರಮಕೈಗೊಳ್ಳಲು ಸೂಚಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ:ಇಂದು ರಾತ್ರಿ ಡಿಕೆಶಿ ಬೆಳಗಾವಿಗೆ ಭೇಟಿ: ನಾಳೆ ಸವದಿ, ಶೆಟ್ಟರ್​ ಭೇಟಿ ಮಾಡಲಿರುವ ಡಿಸಿಎಂ...!

ಸಾರಿಗೆ ಬಸ್​ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಮುಕ್ತ ಅವಕಾಶ:ಎಲ್ಲಾ ಮಹಿಳೆಯರಿಗೆ ಬಸ್ ಪ್ರಯಾಣ ಉಚಿತ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ಬೆಂಗಳೂರಿನ ಶಾಂತಿನಗರದ ಕೆಎಸ್ಆರ್​​ಟಿಸಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯಾದ್ಯಂತ ಮಹಿಳಾ ಪ್ರಯಾಣಿಕರಿಗೆ ಬಸ್ ಪ್ರಯಾಣ ಉಚಿತ ಇರಲಿದೆ. ಎಲ್ಲ ಹೆಣ್ಣು ಮಕ್ಕಳು, ಮಹಿಳೆಯರಿಗೆ ಉಚಿತ ಪ್ರಯಾಣ ಮಾಡಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.

ನಾಲ್ಕು ನಿಗಮಗಳ ಒಟ್ಟು ಆದಾಯ 8,946.85 ಕೋಟಿ ರೂ.‌ ಇದೆ. ಒಟ್ಟು ಕಾರ್ಯಾಚರಣೆ ವೆಚ್ಚ 12,750.49 ಕೋಟಿ ರೂ. ಇದೆ. ನಾಲ್ಕು ನಿಗಮಗಳ ಆರ್ಥಿಕ ಪರಿಸ್ಥಿತಿ, ಕೋವಿಡ್​​ನಲ್ಲಿ ನಷ್ಟ, ಹೊಸ ಬಸ್ ಖರೀದಿ, ನೌಕರರ ನೇಮಕ ಬಗ್ಗೆ ಚರ್ಚೆ ಆಗಿದೆ. ಡಿಮ್ಯಾಂಡ್ ಇರೋ ಕಡೆ ಬಸ್ ಹಾಕಲು ಚರ್ಚೆ ಮಾಡಿದ್ದೀವಿ. ದೇಶದಲ್ಲೇ ಪ್ರತಿಷ್ಠಿತ ಸಾರಿಗೆ ಸಂಸ್ಥೆಗಳಾಗಿ ಬೆಳೆದಿವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:ಕುಡಿವ ನೀರು, ಆರೋಗ್ಯ, ಶಿಕ್ಷಣ, ಕೃಷಿಗೆ ಆದ್ಯತೆ: ಸಚಿವ ಸತೀಶ್ ಜಾರಕಿಹೊಳಿ ಸೂಚನೆ

ABOUT THE AUTHOR

...view details