ಬೆಂಗಳೂರು:ಮಾರಕಾಸ್ತ್ರ ಹಿಡಿದು ಯುವಕರಿಬ್ಬರ ಮೇಲೆ ಹಲ್ಲೆ ಮಾಡಿದ್ದ ಮಾಗಡಿ ರೋಡ್ ಪೊಲೀಸ್ ಠಾಣೆಯ ಎಎಸ್ಐ ಶ್ರೀನಿವಾಸ್ ಅವರನ್ನ ಅಮಾನತು ಮಾಡಿ ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ಎಸ್.ಗಿರೀಶ್ ಆದೇಶ ಹೊರಡಿಸಿದ್ದಾರೆ.
ಅಕ್ಟೋಬರ್ 25ರಂದು ರಾತ್ರಿ ವಿಜಯ ನಗರದ ಆರ್.ಪಿ.ಸಿ ಲೇಔಟ್ 6ನೇ ಮುಖ್ಯರಸ್ತೆಯಲ್ಲಿ ದಯಾನಂದ್ ಹಾಗೂ ಶಶಿಧರ್ ಎಂಬುವವರ ಮೇಲೆ ಸಹಾಯಕ ಸಬ್ ಇನ್ಸ್ಪೆಕ್ಟರ್ ಶ್ರೀನಿವಾಸ್ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದರು. ಈ ಹಲ್ಲೆಗೆ ಸಂಬಂಧಿಸಿದಂತೆ ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಅವತ್ತು ನಡೆದಿದ್ದೇನು?:ಅಕ್ಟೋಬರ್ 25ರಂದು ರಾತ್ರಿ 10.30ರ ಸುಮಾರಿಗೆ ಆರ್.ಪಿ.ಸಿ ಲೇಔಟ್ನ ತೇಜಸ್ವಿನಿ ಬಾರ್ ನಲ್ಲಿ ಮದ್ಯಪಾನ ಮಾಡುತ್ತಿದ್ದ ದಯಾನಂದ್, ಶಶಿಧರ್ ಎಂಬುವವರನ್ನ ಆನಂದ್ ಎಂಬಾತ ಅವಾಚ್ಯವಾಗಿ ನಿಂದಿಸಲಾರಂಭಿಸಿದ್ದ. ಇದಕ್ಕೆ ಪ್ರತಿಯಾಗಿ ''ಯಾರು ನೀನು, ನಮ್ಮನ್ನು ಯಾಕೆ ಬೈಯುತ್ತಿರುವೆ? ಯಾವ ಏರಿಯಾ ನಿಂದು?'' ಎಂದು ಆನಂದ್ನನ್ನು ದಯಾನಂದ್ ಪ್ರಶ್ನಿಸಿದ್ದ. ''ನಂದು ಇದೇ ಏರಿಯಾ'' ಎಂದು ಆನಂದ್ ಉತ್ತರಿಸಿದಾಗ, ''ನಿನ್ನನ್ನ ಈ ಏರಿಯಾದಲ್ಲಿ ನೋಡಿಲ್ವಲ್ಲ?'' ಎಂದು ದಯಾನಂದ್ ಮರು ಪ್ರಶ್ನೆ ಮಾಡಿದ್ದರು. ಆಗ ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಶಶಿಧರ್ ''ಬೇಕಾದ್ರೆ ಬಾ ಮನೆ ತೋರಿಸ್ತಿನಿ'' ಎಂದಿದ್ದ ಆನಂದ್, ತನ್ನದೇ ಆಟೋದಲ್ಲಿ ಬಲವಂತವಾಗಿ ದಯಾನಂದ್ ಹಾಗೂ ಶಶಿಧರ್ ನನ್ನ ಕೂರಿಸಿಕೊಂಡು ತನ್ನ ಚಿಕ್ಕಪ್ಪ ಎಎಸ್ಐ ಶ್ರೀನಿವಾಸ್ ಮನೆ ಬಳಿ ಕರೆತಂದಿದ್ದ.