ಕರ್ನಾಟಕ

karnataka

By

Published : Jul 2, 2021, 12:40 PM IST

Updated : Jul 2, 2021, 12:54 PM IST

ETV Bharat / state

ಶ್ರೀರಾಮುಲು ಪಿಎ ಬಂಧನ ವಿರೋಧಿಗಳಿಗೆ ಅಪಪ್ರಚಾರದ ಸರಕಾಗಲಿದೆ ; ಕಿಡಿ ಹೊತ್ತಿಸುತ್ತಾ ವಿಜಯೇಂದ್ರ ಟ್ವೀಟ್​?

ಸಾರ್ವಜನಿಕರು ಮೋಸ ಹೋಗಬಾರದೆಂಬ ಹಿತದೃಷ್ಟಿಯಿಂದ ಹಾಗೂ ನನ್ನ ವ್ಯಕ್ತಿತ್ವ ರಕ್ಷಣೆಗಾಗಿ, ಅನಿವಾರ್ಯವಾಗಿ ನೀಡಿದ ದೂರಿನ ಮೇಲೆ ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ. ನನ್ನನ್ನೂ ಸೇರಿದಂತೆ ಸಾರ್ವಜನಿಕ ಕ್ಷೇತ್ರದಲ್ಲಿರುವ ಮುಖಂಡರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವ, ವಂಚಿಸುವವರ ಬಗ್ಗೆ ಸಮಾಜ ಎಚ್ಚರದಿಂದ ಇರುವಂತೆ ವಿನಂತಿ..

b y vijayendra
ಬಿ ವೈ ವಿಜಯೇಂದ್ರ

ಬೆಂಗಳೂರು: ಕೆಲಸ‌ ಮಾಡಿ ಕೊಡುವುದಾಗಿ ತಮ್ಮ ಹೆಸರೇಳಿಕೊಂಡು ಜನರಿಗೆ ವಂಚನೆ ಮಾಡಿದ್ದ ಸಚಿವ ಶ್ರೀರಾಮುಲು ಪಿಎ ರಾಜು ಬಂಧನದ ಬೆನ್ನಲ್ಲೇ ಈ ವಿಷಯವನ್ನು ಪ್ರತಿಪಕ್ಷಗಳು ಅಸ್ತ್ರವಾಗಿ ಬಳಸಿಕೊಳ್ಳುವ ಆತಂಕವನ್ನು ವ್ಯಕ್ತಪಡಿಸಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ಸಿಎಂ ಪುತ್ರ ಬಿ ವೈ ವಿಜಯೇಂದ್ರ ಟ್ವೀಟ್ ಮಾಡಿದ್ದಾರೆ.

ಶ್ರೀರಾಮುಲು ಪಿಎ ಬಂಧನ ಸಂಬಂಧ ವಿಜಯೇಂದ್ರ ಟ್ವೀಟ್​​

ಸಾರ್ವಜನಿಕ ಕ್ಷೇತ್ರದಲ್ಲಿರುವಾಗ ನೆರವು ಕೇಳುವವರನ್ನು ಅನುಮಾನಿಸಿ ನೋಡಲಾಗದು. ಹಾಗೆಂದು ಎಚ್ಚರ ತಪ್ಪಲಾಗದು. ಹೆಸರು ದುರುಪಯೋಗಪಡಿಸಿಕೊಂಡು ಕಳಂಕ ಹಚ್ಚುವ ವಂಚಕರಿಂದ ತೊಂದರೆ ತುಸು ಹೆಚ್ಚಾಗಿಯೇ ಬಾಧಿಸುತ್ತಿದೆ. ಇದು ವಿರೋಧಿಗಳಿಗೆ ಅಪಪ್ರಚಾರದ ಸರಕಾಗಿಯೂ ಬಳಕೆಯಾಗುತ್ತಿದೆ ಎಂದು ವಿಜಯೇಂದ್ರ ಟ್ವೀಟ್ ಮಾಡಿದ್ದಾರೆ.

ಶ್ರೀರಾಮುಲು ಪಿಎ ಬಂಧನ ಸಂಬಂಧ ವಿಜಯೇಂದ್ರ ಟ್ವೀಟ್​​

ಇದನ್ನೂ ಓದಿ: ಪಿಎ ರಾಜು ಬಂಧನ ಪ್ರಕರಣ.. ಅಸಮಾಧಾನ ಇಲ್ಲ, ನೋವಾಗಿದೆ ಎಂಬುದು ಸಮಂಜಸ : ಸಚಿವ ಶ್ರೀರಾಮುಲು

ಸಾರ್ವಜನಿಕರು ಮೋಸ ಹೋಗಬಾರದೆಂಬ ಹಿತದೃಷ್ಟಿಯಿಂದ ಹಾಗೂ ನನ್ನ ವ್ಯಕ್ತಿತ್ವ ರಕ್ಷಣೆಗಾಗಿ, ಅನಿವಾರ್ಯವಾಗಿ ನೀಡಿದ ದೂರಿನ ಮೇಲೆ ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ. ನನ್ನನ್ನೂ ಸೇರಿದಂತೆ ಸಾರ್ವಜನಿಕ ಕ್ಷೇತ್ರದಲ್ಲಿರುವ ಮುಖಂಡರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವ, ವಂಚಿಸುವವರ ಬಗ್ಗೆ ಸಮಾಜ ಎಚ್ಚರದಿಂದ ಇರುವಂತೆ ವಿನಂತಿಸಿದ್ದಾರೆ.

Last Updated : Jul 2, 2021, 12:54 PM IST

ABOUT THE AUTHOR

...view details