ಕರ್ನಾಟಕ

karnataka

ETV Bharat / state

ಬೆಂಗಳೂರು ಮಳೆ ಬಗ್ಗೆ ಸಿಎಂ ತುರ್ತು ಸಭೆ: ಮನೆ‌ ಹಾನಿಗೆ 25 ಸಾವಿರ ಪರಿಹಾರ ಘೋಷಣೆ - ಬೆಂಗಳೂರು ಮಳೆ 2020,

ಬೆಂಗಳೂರಿನಲ್ಲಿ ಸುರಿದ ಮಳೆಯಿಂದಾದ ಹಾನಿ ಕುರಿತು ಸಿಎಂ ಯಡಿಯೂರಪ್ಪ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದರು.

meeting held by CM Yediyurappa, Emergence meeting held by CM Yediyurappa, Bangalore rain, Bangalore rain 2020, Bangalore rain 2020 news, ತುರ್ತು ಸಭೆ ನಡೆಸಿದ ಸಿಎಂ, ಬೆಂಗಳೂರು ಮಳೆ ಬಗ್ಗೆ ತುರ್ತು ಸಭೆ ನಡೆಸಿದ ಸಿಎಂ, ಬೆಂಗಳೂರಿನಲ್ಲಿ ತುರ್ತು ಸಭೆ ನಡೆಸಿದ ಸಿಎಂ, ಬೆಂಗಳೂರು ಮಳೆ, ಬೆಂಗಳೂರು ಮಳೆ 2020, ಬೆಂಗಳೂರು ಮಳೆ 2020 ಸುದ್ದಿ,
ತುರ್ತು ಸಭೆ ನಡೆಸಿದ ಸಿಎಂ

By

Published : Oct 24, 2020, 1:30 PM IST

ಬೆಂಗಳೂರು: ಬೆಂಗಳೂರಲ್ಲಿ ನಿನ್ನೆ ಭಾರಿ ಮಳೆ ಸುರಿದು ಅವಾಂತರ ಸೃಷ್ಟಿಯಾದ ಹಿನ್ನೆಲೆ ಸಿಎಂ ಯಡಿಯೂರಪ್ಪ ಬಿಬಿಎಂಪಿ ಅಧಿಕಾರಿಗಳೊಂದಿಗೆ ಇಂದು ತುರ್ತು ಸಭೆ ನಡೆಸಿದರು.

ಕಾವೇರಿ ನಿವಾಸದಲ್ಲಿ ಸಿಎಂ ಯಡಿಯೂರಪ್ಪ ಅಧಿಕಾರಿಗಳ ಜೊತೆ ಸಭೆ ನಡೆಸಿ, ಮಳೆ‌ಹಾನಿಯ ಬಗ್ಗೆ ಮಾಹಿತಿ‌ ಪಡೆದರು. ಮಳೆಯಿಂದ ನಗರದ ಯಾವ ಪ್ರದೇಶಗಳಲ್ಲಿ ಹಾನಿಯಾಗಿದೆ. ಹಾನಿಯ ಪ್ರಮಾಣ ಎಷ್ಟು?. ಪರಿಹಾರ ಕಾರ್ಯ, ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚೆ ನಡೆಸಿದರು.

ಮಳೆ ಹಾನಿ ಬಗ್ಗೆ ತುರ್ತು ಸಭೆ ನಡೆಸಿದ ಸಿಎಂ

ಇನ್ನೂ ಎರಡು ದಿನ ಬೆಂಗಳೂರಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಕಟ್ಟೆಚ್ಚರದಿಂದ ಇರುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದರು. ತಗ್ಗು ಪ್ರದೇಶಗಳಲ್ಲಿ ಇರುವ ಮನೆಗಳ ಬಗ್ಗೆ ಹೆಚ್ಚಿನ ನಿಗಾ ಇಡುವಂತೆ ಮತ್ತು ಯಾರಿಗೂ ಸಮಸ್ಯೆಯಾಗದಂತೆ ಕ್ರಮ ವಹಿಸಲು ಸೂಚಿಸಿದರು.

25 ಸಾವಿರ ರೂ. ಪರಿಹಾರ

ಸಭೆ ಬಳಿಕ ಮಾತನಾಡಿದ ಅವರು, ಮಳೆ ಹಾನಿ ಸಂಭವಿಸಿದ ಪ್ರತಿ ಕುಟುಂಬಕ್ಕೆ ತುರ್ತಾಗಿ 25 ಸಾವಿರ ರೂಪಾಯಿ ನೀಡಲಾಗುವುದು ಎಂದು ತಿಳಿಸಿದರು.

ಸಚಿವ ಆರ್.ಅಶೋಕ್ ಈಗಾಗಲೇ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಎಲ್ಲಾ ಮುಂಜಾಗ್ರತಾ ವ್ಯವಸ್ಥೆಯನ್ನು ಮಾಡಿದ್ದಾರೆ. ಈಗ ನಾನು ಮಳೆ ಹಾನಿ ಬಗ್ಗೆ‌ ಪರಿಶೀಲನೆ ನಡೆಸಲಿದ್ದೇನೆ ಎಂದರು.

ಸಭೆಯಲ್ಲಿ ಸಚಿವ ಆರ್.ಅಶೋಕ್, ಸಿಎಂ ಅಪಾರ ಮುಖ್ಯ ಕಾರ್ಯದರ್ಶಿ ರಮಣ ರೆಡ್ಡಿ, ಬಿಬಿಎಂಪಿ ಆಡಳಿತಾಧಿಕಾರಿ ಗೌರವ ಗುಪ್ತಾ, ಆಯುಕ್ತ ಮಂಜುನಾಥ್ ಪ್ರಸಾದ್ ಭಾಗವಹಿಸಿದ್ದರು.

ABOUT THE AUTHOR

...view details