ಬೆಂಗಳೂರು : ಲೈಟರ್ ವಾಪಸ್ ಕೊಡಲ್ಲ ಅಂದಿದ್ದಕ್ಕೆ ಲಾಂಗ್ ಬೀಸಿದ್ದ ಆರೋಪಿಯನ್ನು ಬಸವೇಶ್ವರನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮಹಾದೇವ ಸ್ವಾಮಿ ಎಂದು ಗುರುತಿಸಲಾಗಿದೆ.
ಜೂನ್ 5ರಂದು ರಾತ್ರಿ ಬಸವೇಶ್ವರನಗರದ ನವ್ಯಾ ಬಾರ್ ಆ್ಯಂಡ್ ರೆಸ್ಟೋರೆಂಟ್ನಲ್ಲಿ ಕುಳಿತು ಕುಡಿಯುತ್ತಿದ್ದ ಆರೋಪಿಯಿಂದ ಜನಾರ್ಧನ ಎಂಬಾತ ಸಿಗರೇಟ್ ಲೈಟರ್ ಪಡೆದಿದ್ದ. ಆದರೆ, ಎಣ್ಣೆ ನಶೆಯಲ್ಲಿದ್ದ ಜನಾರ್ಧನ 'ಲೈಟರ್ ವಾಪಸ್ ಕೊಡಲ್ಲ' ಎಂದಾಗ, ಇಬ್ಬರ ನಡುವೆ ವಾಗ್ವಾದ ನಡೆದಿತ್ತು.
ಇಬ್ಬರ ನಡುವೆ ಗಲಾಟೆಯಾಗುತ್ತಿರುವುದನ್ನು ಗಮನಿಸಿದ ಅಕ್ಕಪಕ್ಕದ ಅಂಗಡಿಯವರು, 'ಲೈಟರ್ ವಿಚಾರಕ್ಕೆ ಯಾಕೆ ಗಲಾಟೆ ಮಾಡಿಕೊಳ್ತಿದ್ದೀರಿ' ಎಂದು ಬೈದು ಬುದ್ಧಿವಾದ ಹೇಳಿ ಕಳುಹಿಸಿದ್ದರು.