ಕರ್ನಾಟಕ

karnataka

ETV Bharat / state

ಬಿಬಿಎಂಪಿ ಚುನಾವಣೆಗೆ ಸಜ್ಜಾಗಿ: ಕಾರ್ಪೋರೇಟರ್​ಗಳಿಗೆ ಹೆಚ್​ಡಿಕೆ ಪರೋಕ್ಷ ಕರೆ - geared up for election

ಬಿಬಿಎಂಪಿ ವ್ಯಾಪ್ತಿಯಲ್ಲಿ ಪರಿಸ್ಥಿತಿ ಹೇಗಿದೆ. ರೇಷನ್ ಕಿಟ್ ಸಮರ್ಪಕವಾಗಿ ಹಂಚಿಕೆಯಾಗಿದೆಯಾ?. ಸ್ಯಾನಿಟೈಸರ್ ವ್ಯವಸ್ಥೆ, ಮೂಲಭೂತ ಸೌಕರ್ಯ ಹಾಗೂ ಅಧಿಕಾರಿಗಳ ಕಾರ್ಯ ವೈಖರಿ ಕುರಿತು ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಬಿಎಂಪಿ ಜೆಡಿಎಸ್ ನಾಯಕಿ ನೇತ್ರಾ ನಾರಾಯಣ್ ಅವರಿಂದ ಮಾಜಿ ಸಿಎಂ ಕುಮಾರಸ್ವಾಮಿ ಮಾಹಿತಿ ಪಡೆದರು.

ಹೆಚ್​ಡಿಕೆ
ಹೆಚ್​ಡಿಕೆ

By

Published : Jun 3, 2020, 3:39 PM IST

ಬೆಂಗಳೂರು: ಲಾಕ್​ಡೌನ್ ಎಫೆಕ್ಟ್​ನಿಂದಾದ ಸಮಸ್ಯೆಗಳ ಕುರಿತು ಮಾಹಿತಿ ಪಡೆಯಲು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಪಾಲಿಕೆಯ ಜೆಡಿಎಸ್​ ಸದಸ್ಯರು, ನಗರದ ಅಧ್ಯಕ್ಷರು ಹಾಗೂ ಮುಖಂಡರ ಜೊತೆ ವಿಡಿಯೋ ಕಾನ್ಫರೆನ್ಸ್​ ಮೂಲಕ ಚರ್ಚೆ ನಡೆಸಿದರು.

ಜೆಪಿ ನಗರದ ತಮ್ಮ ನಿವಾಸದಿಂದ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಬಿಎಂಪಿ ಜೆಡಿಎಸ್ ನಾಯಕಿ ನೇತ್ರಾ ನಾರಾಯಣ್ ಅವರಿಂದ ಮಾಹಿತಿ ಕಲೆಹಾಕಿದ ಅವರು, ಬಿಬಿಎಂಪಿ ವ್ಯಾಪ್ತಿಯಲ್ಲಿ ಪರಿಸ್ಥಿತಿ ಹೇಗಿದೆ, ರೇಷನ್ ಕಿಟ್ ಸಮರ್ಪಕವಾಗಿ ಹಂಚಿಕೆಯಾಗಿದೆಯಾ?. ಸ್ಯಾನಿಟೈಸರ್ ವ್ಯವಸ್ಥೆ, ಮೂಲಭೂತ ಸೌಕರ್ಯ ಹಾಗೂ ಅಧಿಕಾರಿಗಳ ಕಾರ್ಯವೈಖರಿ ಕುರಿತು ಚರ್ಚಿಸಿದರು.

ವಿಡಿಯೋ ಕಾನ್ಫರೆನ್ಸ್​ ಮೂಲಕ ಚರ್ಚೆ ನಡೆಸಿದ ಮಾಜಿ ಸಿಎಂ ಹೆಚ್​ಡಿಕೆ

ಕೊರೊನಾ ಸಂಕಷ್ಟದ ಜೊತೆಗೆ ಬಿಬಿಎಂಪಿ ಚುನಾವಣೆ ಕಡೆಗೂ ಗಮನ ಹರಿಸಬೇಕು. ಮುಂದೆ ಯಾವಾಗ ಬೇಕಾದರೂ ಬಿಬಿಎಂಪಿ ಚುನಾವಣೆ ದಿನಾಂಕ ನಿಗದಿಯಾಗಬಹುದು. ಚುನಾವಣಾ ದೃಷ್ಟಿಯಿಂದ ಎಲ್ಲರೂ ಕ್ಷೇತ್ರ ಕಾರ್ಯವನ್ನು ಕಟ್ಟುನಿಟ್ಟಾಗಿ ಮಾಡಬೇಕು ಎಂದು ಸೂಚಿಸಿದರು.

ಅಧಿಕಾರಿಗಳ ವೈಫಲ್ಯ, ಅಸಮರ್ಪಕ ಕಿಟ್ ಹಂಚಿಕೆ, ಆಹಾರ ಮತ್ತು ಹಾಲು ವಿತರಣೆಯಲ್ಲಿ ವೈಫಲ್ಯ, ಮೂಲಭೂತ ಸೌಲಭ್ಯಗಳ ವಿತರಣೆಯಲ್ಲಿ ಅಸಹಾಯಕತೆಯನ್ನ ಎತ್ತಿ ತೋರಿಸಿ. ಜನರೊಂದಿಗೆ ನೇರ ಸಂಪರ್ಕ ಇಟ್ಟುಕೊಂಡು ಜನರಿಗೆ ಸಂಕಷ್ಟದಲ್ಲಿ ನೆರವಾಗಬೇಕೆಂದು ಹೆಚ್​ಡಿಕೆ ಬಿಬಿಎಂಪಿ ಚುನಾವಣೆಯ ಮುನ್ಸೂಚನೆ ಕೊಟ್ಟರು. ಇದೇ ವೇಳೆ ನಗರದ ಹಲವು ಜೆಡಿಎಸ್ ಮುಖಂಡರ ಜೊತೆಯೂ ವಿಡಿಯೋ ಸಂವಾದದ ಮೂಲಕ ಮಾಹಿತಿ ಪಡೆದುಕೊಂಡರು.

ABOUT THE AUTHOR

...view details