ಕರ್ನಾಟಕ

karnataka

By

Published : Dec 4, 2020, 6:05 PM IST

ETV Bharat / state

ಮೈಸೂರಿನಲ್ಲೂ ಬಿಡಿಎ ಮಾದರಿ ವಸತಿ ಸಮುಚ್ಚಯ ನಿರ್ಮಾಣ: ಮುಡಾ ಅಧ್ಯಕ್ಷ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಬಹು ಮಹಡಿ ವಸತಿ ಸಮುಚ್ಚಯ ನಿರ್ಮಿಸಲು ಉದ್ದೇಶಿಸಲಾಗಿದೆ. ಈ ಸಂಬಂಧ ಇಲ್ಲಿನ ವಸತಿ ಸಮುಚ್ಚಯದ ವಿನ್ಯಾಸ, ರಚನೆ ಸೇರಿ ಇತ್ಯಾದಿ ಮಾಹಿತಿಯನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿರುವ ಹೆಚ್.ವಿ.ರಾಜೀವ್, ಆಯುಕ್ತರಾದ ಡಾ. ನಟೇಶ್, ತಾಂತ್ರಿಕ ವರ್ಗದವರು ಬೆಂಗಳೂರಿನ ಬಿಡಿಎ ಅಧಿಕಾರಿಗಳು ಹಾಗೂ ಇಂಜಿನಿಯರ್​​ಗಳಿಂದ ಸಂಪೂರ್ಣ ಮಾಹಿತಿ ಪಡೆದುಕೊಂಡರು.

mysore
ಮುಡಾ ಅಧ್ಯಕ್ಷ

ಬೆಂಗಳೂರು: ನಗರ ಅಭಿವೃದ್ಧಿ ಪ್ರಾಧಿಕಾರದಿಂದ ಕೆಂಗೇರಿಯ ಕೊಮ್ಮಘಟ್ಟದಲ್ಲಿ ನಿರ್ಮಿಸಲಾಗಿರುವ ಬಹುಮಹಡಿ ವಸತಿ ಸಮುಚ್ಚಯವನ್ನು ಸಚಿವ ಎಸ್.ಟಿ.ಸೋಮಶೇಖರ್ ನೇತೃತ್ವದಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು, ಆಯುಕ್ತರ ನಿಯೋಗ ಭೇಟಿ ನೀಡಿ ಪರಿಶೀಲನೆ ನಡೆಸಿತು.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಬಹು ಮಹಡಿ ವಸತಿ ಸಮುಚ್ಚಯ ನಿರ್ಮಿಸಲು ಉದ್ದೇಶಿಸಲಾಗಿದೆ. ಈ ಸಂಬಂಧ ಇಲ್ಲಿನ ವಸತಿ ಸಮುಚ್ಚಯದ ವಿನ್ಯಾಸ, ರಚನೆ ಸೇರಿ ಇತ್ಯಾದಿ ಮಾಹಿತಿಯನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿರುವ ಹೆಚ್.ವಿ.ರಾಜೀವ್, ಆಯುಕ್ತರಾದ ಡಾ. ನಟೇಶ್, ತಾಂತ್ರಿಕ ವರ್ಗದವರು ಬೆಂಗಳೂರಿನ ಬಿಡಿಎ ಅಧಿಕಾರಿಗಳು ಹಾಗೂ ಇಂಜಿನಿಯರ್​​ಗಳಿಂದ ಸಂಪೂರ್ಣ ಮಾಹಿತಿ ಪಡೆದುಕೊಂಡರು.

ಮೈಸೂರಿನಲ್ಲೂ ಬಿಡಿಎ ಮಾದರಿ ವಸತಿ ಸಮುಚ್ಚಯ ನಿರ್ಮಾಣ

ಕಟ್ಟಡವನ್ನು ಯಾವ ತಂತ್ರಜ್ಞಾನದಿಂದ ಕಟ್ಟಲಾಗಿದೆ? ಇಂತಹ ಮನೆಗಳನ್ನು ಬೆಂಗಳೂರು ವಲಯದಲ್ಲಿ ಎಲ್ಲೆಲ್ಲೆ ಕಟ್ಟಲಾಗಿದೆ? ಅಥವಾ ಕಟ್ಟಲಾಗುತ್ತಿದೆ? ಈ ಬಗ್ಗೆ ಸಾರ್ವಜನಿಕರ ಸ್ಪಂದನೆ ಹೇಗಿದೆ? ಕಡಿಮೆ ದರದಲ್ಲಿ ಮನೆ ನಿರ್ಮಾಣ ಮಾಡುವ ಯಾವುದಾದರೂ ಪ್ಲಾನ್​ ಇದೆಯೇ? ಎಂಬಿತ್ಯಾದಿ ವಿಷಯಗಳ ಬಗ್ಗೆ ನಿಯೋಗವು ಮಾಹಿತಿ ಪಡೆಯಿತು. ಲಿಫ್ಟ್ ಗಳು, ಸ್ಟೇರ್ ಕೇಸ್ ಗಳು, ಇಂಗುಗುಂಡಿ ನಿರ್ಮಾಣ, ರಸ್ತೆಗಳು, ಚರಂಡಿ ವ್ಯವಸ್ಥೆ ಸೇರಿದಂತೆ ಇನ್ನಿತರ ಮೂಲ ಸೌಕರ್ಯಗಳ ಬಗ್ಗೆಯೂ ಮಾಹಿತಿ ಪಡೆಯಿತು.


ಕಡಿಮೆ ದರದಲ್ಲಿ ಗುಣಮಟ್ಟದ ಮನೆ

ಇದೇ ವೇಳೆ, ಮುಡಾ ಅಧ್ಯಕ್ಷರಾದ ಹೆಚ್.ವಿ.ರಾಜೀವ್, ಅಪಾರ್ಟ್​​​​ಮೆಂಟ್​ ವಿನ್ಯಾಸ, ಒಳಾಂಗಣ ವ್ಯವಸ್ಥೆ, ಮೂಲಸೌಕರ್ಯಗಳ ಬಗ್ಗೆ ಅಲ್ಲಿನ ನಿವಾಸಿಗಳಿಂದ ಅಭಿಪ್ರಾಯಗಳನ್ನು ಸಂಗ್ರಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಡಾ ಅಧ್ಯಕ್ಷ ಹೆಚ್.ವಿ.ರಾಜೀವ್, ಸಾಮಾನ್ಯ ಜನರಿಗೂ ಕಡಿಮೆ ದರದಲ್ಲಿ ಮನೆಗಳು ಸಿಗಬೇಕೆಂಬ ಸದಾಶಯವನ್ನು ಸಚಿವ ಸೋಮಶೇಖರ್ ಹೊಂದಿದ್ದಾರೆ. ಮೈಸೂರಿನ ಜನತೆಗೆ ಇಷ್ಟವಾಗುವ ಮನೆಗಳನ್ನು ಕಡಿಮೆ ದರದಲ್ಲಿ ನಿರ್ಮಿಸುವ ಗುರಿಯನ್ನು ನಾವೂ ಹೊಂದಿದ್ದೇವೆ. ಈ ನಿಟ್ಟಿನಲ್ಲಿ ಬೆಂಗಳೂರಿಗೆ ಭೇಟಿ ನೀಡಿ ಅಧ್ಯಯನ ನಡೆಸಿದ್ದೇವೆ. ಇಲ್ಲಿನ ರೂಪುರೇಷೆಗಳು ಸೇರಿದಂತೆ ಎಲ್ಲ ಮಾಹಿತಿಗಳನ್ನು ಪಡೆದು ಮೈಸೂರಿಗೆ ಬೇಕಾದಂತಹ ರೀತಿಯಲ್ಲಿ ಮಾರ್ಪಡಿಸಿ ಮನೆಗಳನ್ನು ನಿರ್ಮಿಸಲಾಗುವುದು ಎಂದರು.

ಉಸ್ತುವಾರಿ ಸಚಿವ ಸೋಮಶೇಖರ್​ಗೆ ಕೃತಜ್ಞತೆ ಅರ್ಪಿಸುವೆ
ಮೈಸೂರು ಹೊರವಲಯ, ರಿಂಗ್ ರೋಡ್ ಸೇರಿದಂತೆ ಹಲವೆಡೆ 6 ರಿಂದ 8 ಸಾವಿರ ಮನೆಗಳನ್ನು ನಿರ್ಮಿಸುವ ಗುರಿ ಹೊಂದಿದ್ದೇವೆ. ಜನರ ಸ್ಪಂದನೆ ನೋಡಿಕೊಂಡು ಹೆಚ್ಚಿನ ಮನೆಗಳ ನಿರ್ಮಾಣ ಮಾಡುತ್ತೇವೆ. ಇದಕ್ಕೆ ಸಹಕಾರ ನೀಡಿ, ಮುತುವರ್ಜಿ ವಹಿಸಿ ನಿಯೋಗವನ್ನು ಬೆಂಗಳೂರಿಗೆ ಕರೆಸಿ ಮಾಹಿತಿ ನೀಡಿದ ಸಚಿವ ಎಸ್.ಟಿ.ಸೋಮಶೇಖರ್​ಗೆ ಕೃತಜ್ಞತೆ ಸಲ್ಲಿಸುತ್ತೇವೆ. ಅವರ ನೇತೃತ್ವದಲ್ಲಿಯೇ ತ್ವರಿತವಾಗಿ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಅಂತಾ ಹೆಚ್.ವಿ.ರಾಜೀವ್ ಹೇಳಿದರು.

ಜನತೆ ಅಭಿರುಚಿಗೆ ತಕ್ಕಂತೆ ಮನೆಗಳ ನಿರ್ಮಾಣ
ಇದೇ ವೇಳೆ ಮಾತನಾಡಿದ ಸಚಿವ ಎಸ್.ಟಿ.ಸೋಮಶೇಖರ್, ಈ ಮುಂಚೆ ಮೈಸೂರಿನಲ್ಲಿ ಮುಡಾ ಅಧ್ಯಕ್ಷರಾದ ಹೆಚ್.ವಿ.ರಾಜೀವ್, ಮೈಸೂರಿನಲ್ಲಿ ಅಪಾರ್ಟ್​​ಮೆಂಟ್ ನಿರ್ಮಿಸುವ ಬಗ್ಗೆ ಪ್ರಸ್ತಾಪಿಸಿದ್ದರು. ಕೊನೆಗೆ ಮುಡಾದವರ ಜೊತೆ ನಾನು ಸಭೆ ನಡೆಸಿ ಚರ್ಚೆ ನಡೆಸಿದೆ. ಮೈಸೂರು ಜನತೆಗೆ ಕಡಿಮೆ ದರದಲ್ಲಿ ಗುಣಮಟ್ಟದ ಮನೆ ನೀಡುವ ಗುರಿಯನ್ನು ಹಾಕಿಕೊಳ್ಳಲಾಗಿದ್ದು, ಜನರ ಅಭಿರುಚಿಗೆ ತಕ್ಕಂತೆ ನಿರ್ಮಾಣ ಮಾಡುವ ನಿಟ್ಟಿನಲ್ಲಿ ನಾವು ಕ್ರಮವಹಿಸಲಾಗುವುದು ಎಂದರು.

ABOUT THE AUTHOR

...view details