ಕರ್ನಾಟಕ

karnataka

By

Published : May 20, 2023, 10:18 PM IST

ETV Bharat / state

ಬೆಂಗಳೂರಿನ ಕುಖ್ಯಾತ ರೌಡಿ ಕೊಲೆ: ತಮಿಳುನಾಡಿನ ಕಾಡಿನಲ್ಲಿ ಶವವಾಗಿ ಪತ್ತೆ

ಬೆಂಗಳೂರು ನಗರದ ಕುಖ್ಯಾತ ರೌಡಿಯಾಗಿದ್ದ ಅಲ್ಯೂಮಿನಿಯಂ ಬಾಬು ತಮಿಳು ನಾಡಿನ ಕಾಡಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

bengaluru-notorious-rowdy-murdered-found-dead-in-tamil-nadu-forest
ಬೆಂಗಳೂರಿನ ಕುಖ್ಯಾತ ರೌಡಿ ಕೊಲೆ, ತಮಿಳುನಾಡಿನ ಕಾಡಿನಲ್ಲಿ ಶವವಾಗಿ ಪತ್ತೆ

ಬೆಂಗಳೂರು: ನಗರದ ಬನಶಂಕರಿ, ಜಯನಗರ ಮತ್ತು ಬೆಂಗಳೂರು ದಕ್ಷಿಣ ಭಾಗಗಳಲ್ಲಿ ಕುಖ್ಯಾತ ರೌಡಿಯಾಗಿದ್ದ ಅಲ್ಯೂಮಿನಿಯಂ ಬಾಬು ಶವ ತಮಿಳುನಾಡಿನ ತಳಿ - ಡೆಂಕಣಿಕೋಟೆ ಕಾಡಿನಲ್ಲಿ ಸಿಕ್ಕಿದೆ. ಪ್ಲಾಸ್ಟಿಕ್ ಚೀಲದಲ್ಲಿ ಅರೆಸುಟ್ಟ ದೇಹವನ್ನು ತಾಳೆ ಪೊದೆಯಲ್ಲಿ ಬಚ್ಚಿಟ್ಟು ಕೊಲೆಗಾರರು ಪರಾರಿಯಾಗಿದ್ದಾರೆ. ಬಾಬುವನ್ನು ಕಾರಿನಲ್ಲೇ ಕಿಡ್ನ್ಯಾಪ್ ಮಾಡಿದ್ರಾ ಅಥವಾ ಬಾಬುವಿನ ಬೈಕ್ ಅಪಘಾತ ಮಾಡಿ ಕೊಲೆ ಮಾಡಿದರಾ ಎಂಬುದನ್ನು ಪೊಲೀಸರೇ ಪತ್ತೆ ಹಚ್ಚಬೇಕಿದೆ.

ಬೆಂಗಳೂರಿನ ಪಾತಕ ಲೋಕದ ಅರಸಯ್ಯ - ಜಲ್ಲಿ ವೆಂಕಟೇಶ್ ಸಿಂಡಿಕೇಟ್​​ನಲ್ಲಿ ಗುರುತಿಸಿಕೊಂಡಿದ್ದ ರೌಡಿ, ಅಲ್ಯೂಮಿನಿಯಂ ರೌಡಿ ಎಂದೇ ಕುಖ್ಯಾತಿಯಾಗಿದ್ದ. ಈಗ ಅರಸಯ್ಯ-ಜಲ್ಲಿ ವೆಂಕಟೇಶ್ ಇಲ್ಲವಾಗಿದ್ದರಿಂದ ಇತ್ತೀಚೆಗೆ ಐದಾರು ವರ್ಷಗಳಿಂದ ಕೊತ್ತನೂರು ದಿನ್ನೆಯಲ್ಲಿ ಸಿಮೆಂಟ್ ಹಾಲೋ ಬ್ಲಾಕ್ ಇಟ್ಟಿಗೆ ಕಾರ್ಖಾನೆ ನಡೆಸುತ್ತಾ ಬದುಕು ಸಾಗಿಸುತ್ತಿದ್ದ. ಇಂದು ತಮಿಳುನಾಡು ತಳಿ ಪೊಲೀಸರಿಗೆ ಕಾಡಿನಲ್ಲಿ ಅರೆ ಸುಟ್ಟ ಸ್ಥಿತಿಯಲ್ಲಿ ಶವವೊಂದು ಪತ್ತೆಯಾಗಿರುವ ಕುರಿತು ಮಾಹಿತಿ ದೊರಕಿದ್ದರಿಂದ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು.

ಬೈಕ್​​ನಲ್ಲಿ ಬಾಬು ಹೋಗುವ ವೇಳೆ ಕಾರಿನಲ್ಲಿ ಹಿಂಬದಿಯಿಂದ ಡಿಕ್ಕಿ ಹೊಡೆದು ಕೊಲೆ ಮಾಡಿ ತಮಿಳುನಾಡಿನ ಕಾಡಿನಲ್ಲಿ ತಂದು ಸುಳಿವಿಲ್ಲದಂತೆ ಸುಡಲು ಇನ್ನಿಲ್ಲದ ಪ್ರಯತ್ನ ನಡೆಸಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ ಎಂದು ಮೂಲಗಳು ತಿಳಿಸಿವೆ. ಬಾಬು ಸಹಚರ ವಲಯದಲ್ಲಿ ಬೆಂಗಳೂರಿನ ಶಾಸಕರೊಬ್ಬರ ಕೈವಾಡ ಕೊಲೆಯ ಹಿಂದಿದೆ ಎಂಬ ಗುಸು-ಗುಸು ಸಹ ಕೇಳಿ ಬರುತ್ತಿದೆ. ಕೊಲೆಯನ್ನು ತಮಿಳುನಾಡು ತಳಿ ಪೊಲೀಸರು ಪ್ರಕರಣ ಬೇಧಿಸಿ ಸತ್ಯ ಹೊರಹಾಕಬೇಕಿದೆ ಎನ್ನುವುದು ಸಾರ್ವಜನಿಕರ ಅಭಿಪ್ರಾಯವಾಗಿದೆ.

ಇದನ್ನೂ ಓದಿ:ಸೋಷಿಯಲ್ ಮೀಡಿಯಾಗಳಲ್ಲಿ ಪ್ರಚೋದನಾಕಾರಿ ಪೋಸ್ಟ್ ಮಾಡಿದ್ರೆ ಕಠಿಣ ಕ್ರಮ: ಮಂಗಳೂರು ಪೊಲೀಸ್​ ಕಮಿಷನರ್ ಎಚ್ಚರಿಕೆ

ಮಗನಿಂದ ಹಲ್ಲೆಗೊಳಗಾಗಿದ್ದ ತಂದೆ ಸಾವು:ಮೊದಲ ಪತ್ನಿಯ ಪುತ್ರ ತನ್ನ ತಂದೆಗೆ ಮರದ ಸಲಾಕೆಯಲ್ಲಿ ಹೊಡೆದು ಗಾಯಗೊಳಿಸಿದ್ದ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಿಸದೇ ಮೃತಪಟ್ಟಿರುವ ಘಟನೆ ದಕ್ಷಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅಮರಮುಡ್ನೂರು ಗ್ರಾಮದಲ್ಲಿ ನಡೆದಿದೆ. ಕುಕ್ಕುಜಡ್ಕದ ದಿ.ಗುರುವ ಎಂಬವರ ಪುತ್ರ ಕಿಟ್ಟು (54) ಮೃತ ವ್ಯಕ್ತಿ. ಹರ್ಷಿತ್ ಕೊಲೆ ಆರೋಪಿ.

ಇದನ್ನೂ ಓದಿ:ಹಳೆ ದ್ವೇಷದ ಹಿನ್ನೆಲೆ ಹತ್ಯೆ: ಎರಡೇ ದಿನದಲ್ಲಿ 7 ಮಂದಿ ಕೊಲೆ ಆರೋಪಿಗಳ ಬಂಧನ

ಮೇ 11ರಂದು ಕಿಟ್ಟು ಅವರ ಮನೆಗೆ ಬಂದ ಅವರ ಮೊದಲ ಪತ್ನಿಯ ಮಗ ಹರ್ಷಿತ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಎನ್ನಲಾಗಿದೆ. ಬಳಿಕ ಅಂಗಳದಲ್ಲಿದ್ದ ಅಡಕೆ ಮರದ ಸಲಾಕೆಯಿಂದ ಕಿಟ್ಟು ಅವರ ತಲೆಗೆ ಹೊಡೆದು ಗಾಯಗೊಳಿಸಿದ್ದ. ಪರಿಣಾಮ ಕಿಟ್ಟು ಅವರು ಕುಸಿದು ಬಿದ್ದಿದ್ದರು. ಕೂಡಲೇ ಅವರನ್ನು ಅವರ ಪುತ್ರ ನಿತ್ಯಾನಂದ ಅವರು ಆ್ಯಂಬುಲೆನ್ಸ್​ನಲ್ಲಿ ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಒಳರೋಗಿಯಾಗಿ ದಾಖಲಿಸಿದ್ದರು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ.

ಇದನ್ನೂ ಓದಿ:SSLC ಪರೀಕ್ಷೆಯ ಎಲ್ಲಾ ವಿಷಯದಲ್ಲೂ ವಿದ್ಯಾರ್ಥಿ ಟಾಪರ್​​.. ಫಲಿತಾಂಶಕ್ಕೂ ಮುನ್ನ ವಿಧಿಯಾಟವೇ ಬೇರೆಯಾಗಿತ್ತು..

ABOUT THE AUTHOR

...view details