ಕರ್ನಾಟಕ

karnataka

ETV Bharat / state

ಬೆಂಗಳೂರಲ್ಲಿ ಮುಂದುವರಿದ ಮಳೆ: ಇಂದು ರಾತ್ರಿ ಸಿಟಿ ರೌಂಡ್ಸ್ ಹಾಕಲಿರುವ ಸಿಎಂ - ಬೆಂಗಳೂರಲ್ಲಿ ಭಾರಿ ಮಳೆ

ಬೆಂಗಳೂರಲ್ಲಿ ಭಾರಿ ಮಳೆ ಮುಂದುವರಿದಿದೆ. ಮಳೆ ಹಾನಿ ಪೀಡಿತ ಪ್ರದೇಶಗಳಿಗೆ ಇಂದು ರಾತ್ರಿ ಸಿಎಂ ಬೊಮ್ಮಾಯಿ ಭೇಟಿ ನೀಡಲಿದ್ದಾರೆ.

ಬೆಂಗಳೂರಲ್ಲಿ ಮುಂದುವರಿದ ಮಳೆ
ಬೆಂಗಳೂರಲ್ಲಿ ಮುಂದುವರಿದ ಮಳೆ

By

Published : Sep 6, 2022, 9:43 PM IST

ಬೆಂಗಳೂರು: ಸತತ ಮಳೆಯಿಂದ ತತ್ತರಿಸಿರುವ ರಾಜ್ಯ ರಾಜಧಾನಿ ಜನತೆಗೆ ಇಂದೂ ಮಳೆರಾಯನ ಕಾಟ ಮುಂದುವರಿದಿದೆ. ಮಳೆ ಅನಾಹುತದ ಹಿನ್ನೆಲೆಯಲ್ಲಿ ರಾತ್ರಿ 10 ಗಂಟೆಯ ನಂತೆ ಸಿಎಂ ಬಸವರಾಜ ಬೊಮ್ಮಾಯಿ‌ ನಗರ ಸಂಚಾರ ನಡೆಸಲಿದ್ದಾರೆ.

ಬೆಂಗಳೂರಲ್ಲಿ ಮುಂದುವರಿದ ಮಳೆ: ಸಂಜೆಯವರೆಗೂ ಸುಡು ಬಿಸಿಲಿನಿಂದ ಕೂಡಿದ್ದ ಬೆಂಗಳೂರು ವಾತಾವರಣ ಸಂಜೆಯಾಗುತ್ತಿದ್ದಂತೆ ಸಂಪೂರ್ಣ ಬದಲಾಗಿದ್ದು, ವ್ಯಾಪಕ ಮಳೆಯಾಯಿತು. ಸಂಜೆ 7 ಗಂಟೆಯಿಂದ 8.30 ರವರೆಗೆ ಮಳೆ ಸುರಿಯಿತು. ಮೆಜೆಸ್ಟಿಕ್, ಮಲ್ಲೇಶ್ವರಂ, ಶಾಂತಿನಗರ, ಶಿವಾಜಿನಗರ, ಜೆಪಿ ನಗರ, ಯಶವಂತಪುರ, ಸರ್ಜಾಪುರ ರಸ್ತೆ, ಬೆಳ್ಳಂದೂರು ಸೇರಿದಂತೆ ಹಲವು ಕಡೆ ವ್ಯಾಪಕ ಮಳೆಯಾಯಿತು. ವರುಣನ ಆರ್ಭಟಕ್ಕೆ ರಸ್ತೆಗಳೆಲ್ಲಾ ನದಿಯಂತಾಗಿದ್ದು, ವಾಹನ ಸವಾರರು ಪರದಾಡಬೇಕಾಯಿತು.

ಸಿಎಂ ಬೊಮ್ಮಾಯಿ ಸಿಟಿ ರೌಂಡ್ಸ್:ಮಹಾಮಳೆ ಮುಂದುವರೆದಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ರಾತ್ರಿ ಸಿಟಿ ರೌಂಡ್ಸ್ ಮೂಲಕ ಮಳೆ ಹಾನಿ ವೀಕ್ಷಣೆ ಮಾಡಲಿದ್ದಾರೆ. ರಾತ್ರಿ ಹತ್ತು ಗಂಟೆ ನಂತರ ಬೆಳ್ಳಂದೂರು, ಇಕೋ ಸ್ಪೇಸ್, ವರ್ತೂರು ಸರ್ಜಾಪುರ ರಸ್ತೆ ಸೇರಿದಂತೆ ಹಲವು ಪ್ರದೇಶಗಳಲ್ಲಿ ಸಿಎಂ ನಗರ ಪ್ರದಕ್ಷಿಣೆ ಹಾಕಲಿದ್ದಾರೆ.

ಈಗಾಗಲೇ ಪಾಲಿಕೆಯಲ್ಲಿ ಸಹಾಯವಾಣಿ ಆರಂಭಿಸಿದ್ದು, ಕಂಟ್ರೋಲ್ ರೂಮ್​​ನಲ್ಲಿನ ಅಧಿಕಾರಿಗಳಿಗೆ ದಿನದ 24 ಗಂಟೆಯೂ ಕರ್ತವ್ಯದಲ್ಲಿರುವಂತೆ ಸೂಚಿಸಲಾಗಿದ್ದು, ಇದೆಲ್ಲವನ್ನೂ ಸಿಎಂ ಪರಿಶೀಲನೆ ನಡೆಸಲಿದ್ದಾರೆ.

(ಇದನ್ನೂ ಓದಿ: ಜಲಾವೃತವಾದ ಲೇಔಟ್​ಗಳು.. ಮನೆ ಖಾಲಿ ಮಾಡಿ ಹೋಟೆಲ್,​ ಲಾಡ್ಜ್​ ಸೇರಿದ ಬೆಂಗಳೂರಿಗರು)

ABOUT THE AUTHOR

...view details