ಕರ್ನಾಟಕ

karnataka

ETV Bharat / state

ಬಿಎಂಟಿಸಿ ಚಾಲಕರಿಗೆ ಉತ್ತಮ ಸೇವಾ ಪ್ರಶಸ್ತಿ

ಮಹಾನಗರ ಸಾರಿಗೆ ಸಂಸ್ಥೆ ವತಿಯಿಂದ 71ನೇ ಗಣರಾಜ್ಯೋತ್ಸವನ್ನು ಆಚರಿಸಲಾಯಿತು. ಈ ವೇಳೆ ಪ್ರಯಾಣಿಕರಿಗೆ ಉತ್ತಮ ಸೇವೆ ನೀಡಿರುವ 4 ಮಂದಿ ಸಿಬ್ಬಂದಿಗೆ 500 ರೂಪಾಯಿ ನಗದು ಬಹುಮಾನದೊಂದಿಗೆ 'ಉತ್ತಮ ಸೇವಾ' ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.

Best Service Award
ಉತ್ತಮ ಸೇವೆ ಸಲ್ಲಿಸಿದ ಚಾಲಕರಿಗೆ ಉತ್ತಮ ಸೇವಾ ಪ್ರಶಸ್ತಿ

By

Published : Jan 26, 2020, 1:39 PM IST

ಬೆಂಗಳೂರು: ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ವತಿಯಿಂದ ಗಣರಾಜ್ಯೋತ್ಸ ಆಚರಿಸಲಾಯಿತು.

ಬಿಎಂಟಿಸಿ ಅಧ್ಯಕ್ಷ ನಂದೀಶ ರೆಡ್ಡಿ ಧ್ವಜಾರೋಹಣ ನೆರವೇರಿಸಿದರು.‌ ನಂತರ ಸಂವಿಧಾನ ಶಿಲ್ಪಿ ಡಾ.ಬಿ.ಆರ್​. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಸಿ. ಶಿಖಾ, ಭದ್ರತಾ ಮತ್ತು ಜಾಗೃತಿ ನಿರ್ದೇಶಕರು ಅನುಪಮ್ ಅಗರವಾಲ್ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಚಾಲಕರಿಗೆ ಉತ್ತಮ ಸೇವಾ ಪ್ರಶಸ್ತಿ

ಇದೇ ವೇಳೆ ಪ್ರಯಾಣಿಕರಿಗೆ ಉತ್ತಮ ಸೇವೆ ಸಲ್ಲಿಸಿರುವಂತಹ 4 ಸಿಬ್ಬಂದಿಗೆ 500 ರೂಪಾಯಿ ನಗದು ಬಹುಮಾನದೊಂದಿಗೆ "ಉತ್ತಮ ಸೇವಾ" ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.

ABOUT THE AUTHOR

...view details