ಕರ್ನಾಟಕ

karnataka

ETV Bharat / state

ಸಿ.ಪಿ.ಯೋಗೇಶ್ವರ್​ಗೆ ನೀಡಿದಂತೆ ನಮಗೂ ಅನುದಾನ ನೀಡಿ: ಭೋಜೇಗೌಡ ಒತ್ತಾಯ

ಸಿ.ಪಿ.ಯೋಗೇಶ್ವರ್ ಅವರಿಗೆ ನೀಡಿದಂತೆ ಉಳಿದವರಿಗೂ ಅನದಾನ ಮಾದರಿಯಲ್ಲಿ ಕರ್ನಾಟಕದ ಎಲ್ಲ ವಿಧಾನ ಪರಿಷತ್ತಿನ ಶಾಸಕರ ಕ್ಷೇತ್ರಕ್ಕೂ ಅನುದಾನ ನೀಡಬೇಕೆಂದು ಜೆಡಿಎಸ್ ಭೋಜೇಗೌಡರು ಸಿಎಂ ಅವರಿಗೆ ಒತ್ತಾಯ ಮಾಡಿದರು.

By

Published : Oct 3, 2022, 8:30 PM IST

KN_BNG_
ಎಂಎಲ್​ಸಿ ಭೋಜೇಗೌಡ

ಬೆಂಗಳೂರು: ಎಂಎಲ್‌ಸಿ ಸಿ.ಪಿ.ಯೋಗೇಶ್ವರ್ ಅವರಿಗೆ ಕೋರಿಕೆಯ ಮೇರೆಗೆ 50 ಕೋಟಿ ರೂ. ಅನುದಾನ ನೀಡಿದಂತೆ ಎಲ್ಲ ವಿಧಾನ ಪರಿಷತ್ ಸದಸ್ಯರಿಗೂ 50 ಕೋಟಿ ರೂ. ಅನುದಾನ ನೀಡಬೇಕು ಎಂದು ಜೆಡಿಎಸ್ ಮೇಲ್ಮನೆ ಸದಸ್ಯ ಭೋಜೇಗೌಡರು ರಾಜ್ಯ ಸರ್ಕಾರವನ್ನ ಒತ್ತಾಯ ಮಾಡಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು, ಮುಖ್ಯಮಂತ್ರಿಗಳು ಚನ್ನಪಟ್ಟಣ ಕ್ಷೇತ್ರಕ್ಕೆ ವಿಶೇಷ ಅನುದಾನ ನೀಡಿರುವುದು ಸ್ವಾಗತಾರ್ಹ. ಅಲ್ಲಿನ ವಿಧಾನ ಪರಿಷತ್ ಸದಸ್ಯರ ಕೋರಿಕೆಯನ್ನು ಮನ್ನಿಸಿ ಅನುದಾನ ಬಿಡುಗಡೆ ಮಾಡಿರುವುದು ಸಂತಸದ ಸಂಗತಿ ಎಂದು ಹೇಳಿದ್ದಾರೆ. ಸಿ.ಪಿ.ಯೋಗೇಶ್ವರ್ ಅವರಿಗೆ ನೀಡಿದ ಮಾದರಿಯಲ್ಲಿ ಕರ್ನಾಟಕದ ಎಲ್ಲ ವಿಧಾನ ಪರಿಷತ್ತಿನ ಶಾಸಕರ ಕ್ಷೇತ್ರಕ್ಕೂ 50 ಕೋಟಿಗಳ ಅನುದಾನ ನೀಡಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯ ಮಾಡಿದ್ದಾರೆ.

ಇದನ್ನೂ ಓದಿ:ಲಖಿಂಪುರ ಖೇರಿ ರೈತರ ಸಾವಿಗೆ ವರ್ಷವಾದರೂ ಪರಿಹಾರ ಸಿಕ್ಕಿಲ್ಲ: ಸಿದ್ದರಾಮಯ್ಯ ಬೇಸರ

ABOUT THE AUTHOR

...view details