ಕರ್ನಾಟಕ

karnataka

By

Published : Jul 24, 2019, 10:10 AM IST

ETV Bharat / state

ಕಾರ್ಯಕರ್ತರ ಸಂಭ್ರಮಾಚರಣೆ....ಸರ್ಕಾರ ರಚಿಸಲು ಬಿಎಸ್​ವೈ ಪೂರ್ವಸಿದ್ಧತೆ

ಮೈತ್ರಿ ಸರ್ಕಾರ ಪತನವಾದ ಹಿನ್ನಲೆಯಲ್ಲಿ ಬಿಜೆಪಿ ಸರ್ಕಾರ ರಚನೆಯ ಉತ್ಸಾಹದಲ್ಲಿದೆ. ಈ ಹಿನ್ನೆಲೆಯಲ್ಲಿ ಡಾಲರ್ಸ್ ಕಾಲೊನಿಯ ಬಿ.ಎಸ್.ಯಡಿಯೂರಪ್ಪ ನಿವಾಸದ ಮುಂದೆ ಬಿಜೆಪಿ ಕಾರ್ಯಕರ್ತರು ಸಂಭ್ರಮಿಸಿದ್ದಾರೆ.

ಯಡಿಯೂರಪ್ಪ ಮನೆ ಮುಂದೆ ಕಾರ್ಯಕರ್ತರ ಸಂಭ್ರಮಾಚರಣೆ..ಸರ್ಕಾರ ರಚಿಸಲು ಬಿಎಸ್​ವೈ ಪೂರ್ವಸಿದ್ಧತೆ

ಬೆಂಗಳೂರು:ಮೈತ್ರಿ ಸರ್ಕಾರ ವಿಶ್ವಾಸಮತ ಯಾಚನೆಯಲ್ಲಿ ಸೋಲು ಅನುಭವಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಸರ್ಕಾರ ರಚನೆಯ ಉತ್ಸಾಹದಲ್ಲಿದ್ದು, ಡಾಲರ್ಸ್ ಕಾಲೋನಿಯ ಬಿ.ಎಸ್​.ಯಡಿಯೂರಪ್ಪ ನಿವಾಸದ ಮುಂದೆ ಬಿಜೆಪಿ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಿಸಿದ್ದಾರೆ.

ಯಡಿಯೂರಪ್ಪ ಮನೆ ಮುಂದೆ ಕಾರ್ಯಕರ್ತರ ಸಂಭ್ರಮಾಚರಣೆ..ಸರ್ಕಾರ ರಚಿಸಲು ಬಿಎಸ್​ವೈ ಪೂರ್ವಸಿದ್ಧತೆ

ಇಂದು ಮುಂಜಾನೆ 6 ಗಂಟೆಯಿಂದಲೇ ಬೇರೆ ಬೇರೆ ಊರುಗಳಿಂದ ಬಿಜೆಪಿ ಕಾರ್ಯಕರ್ತರು ಹಾಗೂ ಬಿಎಸ್​ವೈ ಅಭಿಮಾನಿಗಳು, ಶುಭಕೋರಲು ಹೂಗುಚ್ಛ, ಹೂವಿನ ಹಾರಗಳೊಂದಿಗೆ ಆಗಮಿಸಿದ್ದಾರೆ. ಪರಸ್ಪರ ಸಿಹಿ ತಿನ್ನಿಸಿ ಸಂಭ್ರಮ ಪಡುತ್ತಿದ್ದಾರೆ. ಬಿಎಸ್​ವೈ ಪುತ್ರ ವಿಜಯೇಂದ್ರ, ಶಾಸಕ ಮಾದುಸ್ವಾಮಿ, ಬೋಪಯ್ಯ ಹಾಗೂ ಮಾಜಿ ಶಾಸಕ ಜೀವರಾಜ್, ಸುರೇಶ್ ಗೌಡ, ಬಸವರಾಜ್ ಬೊಮ್ಮಾಯಿ ಆಗಮಿಸಿದ್ದಾರೆ.

ಯಡಿಯೂರಪ್ಪ ತಡರಾತ್ರಿ ರಮಡಾ ರೆಸಾರ್ಟ್​ನಿಂದ ತಮ್ಮ ಮನೆಗೆ ಆಗಮಿಸಿದ್ದು, ಎಂದಿನಂತೆ ಬೆಳಗಿನ ವಾಕಿಂಗ್ ಮಾಡದೆ, ಕಾರ್ಯಕರ್ತರನ್ನು ಭೇಟಿಯಾಗಲು ಸಿದ್ಧರಾಗುತ್ತಿದ್ದಾರೆ. ಇಂದು ಬಿಜೆಪಿ ಶಾಸಕಾಂಗ ಸಭೆ ಕರೆಯುವ ಸಾಧ್ಯತೆಯಿದ್ದು, ಸರ್ಕಾರ ರಚಿಸಲು ಬೇಕಾದ ಪೂರ್ವಸಿದ್ಧತೆ ಮಾಡಿಕೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.

For All Latest Updates

ABOUT THE AUTHOR

...view details