ಕರ್ನಾಟಕ

karnataka

ETV Bharat / state

ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಇಂದು ಬಿಜೆಪಿ ಅಭ್ಯರ್ಥಿ ಪುಟ್ಟಣ್ಣ ನಾಮಪತ್ರ ಸಲ್ಲಿಕೆ

ವಿಧಾನಪರಿಷತ್​ ಚುನಾವಣೆಗೆ ಉಚ್ಛಾಟಿತ ಜೆಡಿಎಸ್​ ಎಂಎಲ್​ಸಿ ಪುಟ್ಟಣ್ಣ ಬಿಜೆಪಿ ಅಭ್ಯರ್ಥಿ ಎಂದು ಸಿಎಂ ಬಿ.ಎಸ್. ​ಯಡಿಯೂರಪ್ಪ ಘೋಷಿಸಿದ್ದಾರೆ. ಶಿಕ್ಷಕರ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಕೆ ಮಾಡಲು ನಾಳೆಯೇ ಕಡೆಯ ದಿನವಾಗಿದ್ದು ಕೊನೆಯ ದಿನದಂದು ಪುಟ್ಟಣ್ಣ ಉಮೇದುವಾರಿಕೆ ಸಲ್ಲಿಕೆ ಮಾಡುತ್ತಿದ್ದಾರೆ.

By

Published : Oct 8, 2020, 12:00 AM IST

BJP candidate puttanna will nomination fill tomorrow
ಬಿಜೆಪಿ ಅಭ್ಯರ್ಥಿ ಪುಟ್ಟಣ್ಣ

ಬೆಂಗಳೂರು:ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕ ಕ್ಷೇತ್ರದಿಂದ ನಡೆಯುವ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಜೆಡಿಎಸ್ ತೊರೆದು ಬಿಜೆಪಿ ಸೇರಿರುವ ಪುಟ್ಟಣ್ಣ ಗುರುವಾರ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

ಬಿಜೆಪಿ ಅಭ್ಯರ್ಥಿ ಪುಟ್ಟಣ್ಣ

ಗುರುವಾರ ಬೆಳಗ್ಗೆ 11ಗಂಟೆಗೆ ಶಾಂತಿನಗರದಲ್ಲಿರುವ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮ ಪತ್ರ ಸಲ್ಲಿಸುತ್ತಿದ್ದು, ಪಕ್ಷದ ಮುಖಂಡರು ಉಪಸ್ಥಿತರಿರಲಿದ್ದಾರೆ. ಶಿಕ್ಷಕರ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಕೆ ಮಾಡಲು ಗುರುವಾರವೇ ಕಡೆಯ ದಿನವಾಗಿದ್ದು ಕೊನೆಯ ದಿನದಂದು ಪುಟ್ಟಣ್ಣ ಉಮೇದುವಾರಿಕೆ ಸಲ್ಲಿಕೆ ಮಾಡುತ್ತಿದ್ದಾರೆ.

ABOUT THE AUTHOR

...view details