ಕರ್ನಾಟಕ

karnataka

ಬಿಜೆಪಿ ಸರ್ಕಾರ ಅಧಿಕಾರ ಬಳಸಿ ವಿಪಕ್ಷಗಳನ್ನು ಬೆದರಿಸುವ ತಂತ್ರ ಮಾಡುತ್ತಿದೆ: ರೇವಣ್ಣ

By

Published : Sep 7, 2019, 9:32 PM IST

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅಧಿಕಾರ ದುರ್ಬಳಕೆ ಮಾಡಿಕೊಂಡು ವಿಪಕ್ಷಗಳನ್ನು ಬೆದರಿಸುವ ತಂತ್ರ ಮಾಡುತ್ತಿವೆ ಎಂದು ಮಾಜಿ ಸಚಿವ ಹಾಗೂ ಶಾಸಕ ಹೆಚ್.ಡಿ.ರೇವಣ್ಣ ಆರೋಪಿಸಿದರು.

ಬಿಜೆಪಿ ಸರ್ಕಾರ ಅಧಿಕಾರ ಬಳಸಿ ವಿಪಕ್ಷಗಳನ್ನು ಬೆದರಿಸುವ ತಂತ್ರ ಮಾಡುತ್ತಿದೆ: ಹೆಚ್.ಡಿ.ರೇವಣ್ಣ ಆಕ್ರೋಶ

ಹಾಸನ:ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅಧಿಕಾರ ದುರ್ಬಳಕೆ ಮಾಡಿಕೊಂಡು ವಿಪಕ್ಷಗಳನ್ನು ಬೆದರಿಸುವ ತಂತ್ರ ಮಾಡುತ್ತಿವೆ ಎಂದು ಮಾಜಿ ಸಚಿವ ಹಾಗೂ ಶಾಸಕ ಹೆಚ್.ಡಿ.ರೇವಣ್ಣ ಆರೋಪಿಸಿದರು.

ಬಿಜೆಪಿ ಸರ್ಕಾರ ಅಧಿಕಾರ ಬಳಸಿ ವಿಪಕ್ಷಗಳನ್ನು ಬೆದರಿಸುವ ತಂತ್ರ ಮಾಡುತ್ತಿದೆ: ಹೆಚ್.ಡಿ.ರೇವಣ್ಣ ಆಕ್ರೋಶ

ಪಟ್ಟಣದಲ್ಲಿ ಆಯೋಜಿಸಿದ್ದ ಆಲೂರು ತಾಲೂಕು ಜೆಡಿಎಸ್ ಕಾರ್ಯಕರ್ತರ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಪ್ರವಾಹದಿಂದ ಜಿಲ್ಲೆಯಲ್ಲಿ 500 ಕೋಟಿಗೂ ಹೆಚ್ಚು ಹಾನಿ ಸಂಭವಿಸಿದೆ. ಆದರೆ ಕೇಂದ್ರ ಸರ್ಕಾರ ಒಂದು ನಯಾಪೈಸೆ ಬಿಡುಗಡೆ ಮಾಡಿಲ್ಲ. ಈ ಹಿಂದೆ ನಮ್ಮ ಪಕ್ಷ ಅಧಿಕಾರದಲ್ಲಿದ್ದಾಗ ಬಿಜೆಪಿಯವರು ಹಾಸನ ಜಿಲ್ಲೆಗೆ ದೊಡ್ಡ ಮಟ್ಟದಲ್ಲಿ ಕೊಳ್ಳೆ ಹೊಡೆಯುತ್ತಿದ್ದಾರೆ ಎನ್ನುವ ರೀತಿಯಲ್ಲಿ ಮಾತನಾಡುತ್ತಿದ್ರು. ಈಗ ಯಡಿಯೂರಪ್ಪನವರು ತಮ್ಮ ಸ್ವಂತ ಕ್ಷೇತ್ರ ಶಿಕಾರಿಪುರಕ್ಕೆ ಸಾವಿರಾರು ಕೋಟಿ ನೀಡುವ ಮೂಲಕ ಲೂಟಿ ಹೊಡೆಯುತ್ತಿದ್ದಾರೆ ಎಂದು ದೂರಿದ್ರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನಮ್ಮ ಮೇಲೆ ದ್ವೇಷದ ರಾಜಕಾರಣ ಮಾಡುತ್ತಾ ವಿಪಕ್ಷಗಳನ್ನು ಹತ್ತಿಕ್ಕುವ ಪ್ರಯತ್ನಕ್ಕೆ ಕೈಹಾಕಿರುವುದು ಹಗಲುಗನಸು. ದೇವೇಗೌಡರ ಕುಟುಂಬ ಎಂದೂ ಕೂಡ ದ್ವೇಷದ ರಾಜಕಾರಣ ಮಾಡಿಲ್ಲ. ನಾವು ದೇಶಕ್ಕೆ ಮಾದರಿಯಾಗಿದ್ದೇವೆ. ಮುಂದಿನ ದಿನಗಳಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಆಡಳಿತ ವೈಫಲ್ಯವನ್ನು ಎತ್ತಿ ತೋರಿಸಲು ಪಕ್ಷದ ಸಂಘಟನೆಗೆ ಕಾರ್ಯಕರ್ತರು ಕೈ ಜೋಡಿಸಬೇಕು ಎಂದು ಮನವಿ ಮಾಡಿದ್ರು.

ABOUT THE AUTHOR

...view details