ಕರ್ನಾಟಕ

karnataka

ETV Bharat / state

ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಇಂದು ಬೆಂಗಳೂರಿಗೆ: ಮೂರು ದಿನ ರಾಜ್ಯ ಪ್ರವಾಸ - ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಇಂದು ರಾತ್ರಿ 8.10ಕ್ಕೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ನಗರದ ಕುಮಾರಕೃಪಾ ಗೆಸ್ಟ್ ಹೌಸ್​​ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ರಾಜ್ಯ ಭೇಟಿ: ನಾಳೆಯಿಂದ ಮೂರು ದಿನ ಪ್ರವಾಸ
http://10.10.50.85:6060///finalout4/karnataka-nle/finalout/14-October-2022/16645195_news.jpg

By

Published : Oct 14, 2022, 5:26 PM IST

ಬೆಂಗಳೂರು:ರಾಜ್ಯದಲ್ಲಿ ಆರಂಭಗೊಂಡಿರುವ ಬಿಜೆಪಿ ಜನ ಸಂಕಲ್ಪ ಯಾತ್ರೆಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಭಾಗವಹಿಸಲಿದ್ದು, ಮೂರು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಇಂದು ರಾತ್ರಿ 8.10ಕ್ಕೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ನಗರದ ಕುಮಾರಕೃಪಾ ಗೆಸ್ಟ್ ಹೌಸ್​​ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. 15ರಂದು ಅವರು ಹಾವೇರಿ, ಹಿರೇಕೆರೂರುಗಳಲ್ಲಿ ವಿವಿಧ ಪೂರ್ವನಿಗದಿತ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ರಾತ್ರಿ ಅವರು ಹುಬ್ಬಳ್ಳಿಯಲ್ಲಿ ವಾಸ್ತವ್ಯ ಇರುವರು. 16ರಂದು ಅವರು ಹುಬ್ಬಳ್ಳಿ- ಧಾರವಾಡಗಳಿಗೆ ಸಂಬಂಧಿಸಿದ ಸಭೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ಬೆಳಗಾವಿಗೆ ತೆರಳಿ ಅಲ್ಲಿ ಪೂರ್ವನಿಗದಿತ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು ಹಾಗೂ ಬೆಳಗಾವಿ ಕೆಎಲ್​ಇ ಗೆಸ್ಟ್ ಹೌಸ್ ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. 17ರಂದು ಚಿಕ್ಕೋಡಿಯಲ್ಲಿ ಪೂರ್ವ ನಿಗದಿತ ಸಭೆಗಳಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಮಧ್ಯಾಹ್ನ ಬೆಳಗಾವಿ ವಿಮಾನ ನಿಲ್ದಾಣದಿಂದ ದೆಹಲಿಗೆ ಹಿಂತಿರುಗಲಿದ್ದಾರೆ.

ಇದನ್ನೂ ಓದಿ: 150 ಸ್ಥಾನ ಗೆಲ್ಲಲು ರೋಡ್ ಮ್ಯಾಪ್: ಅರುಣ್ ಸಿಂಗ್

ABOUT THE AUTHOR

...view details