ಬೆಂಗಳೂರು: ರಾಜ್ಯದ ನೂತನ ರಾಜ್ಯಪಾಲರಾಗಿ ನೇಮಕಗೊಂಡಿರುವ ಕೇಂದ್ರ ಸಚಿವ ಹಾಗು ಬಿಜೆಪಿ ಹಿರಿಯ ನಾಯಕ ತಾವರ್ ಚಂದ್ ಗೆಹ್ಲೋಟ್ ಅವರಿಗೆ ರಾಜ್ಯ ಬಿಜೆಪಿ ನಾಯಕರು ಶುಭಾಷಯ ಕೋರಿದರು.
ಗೆಹ್ಲೋಟ್ ನಿವಾಸಕ್ಕೆ ತೆರಳಿದ ಕೇಂದ್ರ ಸಚಿವ ಡಿ.ವಿ ಸದಾನಂದಗೌಡ, ನಿಯೋಜಿತ ರಾಜ್ಯಪಾಲರಿಗೆ ಅಭಿನಂದನೆ ಸಲ್ಲಿಸಿದರು. ಸಾಂಪ್ರದಾಯಿಕ ಮೈಸೂರು ಪೇಟ ತೊಡಿಸಿ, ಕೇಂದ್ರ ಸಂಪುಟದಲ್ಲಿ ಸಹಪಾಠಿಯಾಗಿಯೂ ಆಗಿದ್ದ ಗೆಹ್ಲೋಟ್ ಅವರಿಗೆ ರಾಜ್ಯದ ಪರವಾಗಿ ಸ್ವಾಗತ ಕೋರಿದರು.