ಕರ್ನಾಟಕ

karnataka

By

Published : Nov 23, 2022, 7:05 AM IST

ETV Bharat / state

ವ್ಯವಸ್ಥೆಯ ಸಕಾರಾತ್ಮಕ ಬದಲಾವಣೆಯೇ ಬಿಜೆಪಿ ಧ್ಯೇಯ: ಸಚಿವ ಅಶ್ವತ್ಥ ನಾರಾಯಣ

ಕಷ್ಟ ಸುಖಗಳು ಪ್ರತಿಯೊಬ್ಬರ ಬದುಕಿನಲ್ಲೂ ಬೇರೆ ಬೇರೆ ಸ್ವರೂಪದಲ್ಲಿ ಇರುತ್ತವೆ. ಇದು ಯಾರಿಗೂ ತಪ್ಪಿದ್ದಲ್ಲ. ಇದರ ನಡುವೆಯೇ ವ್ಯವಸ್ಥೆಯನ್ನು ಉತ್ತಮಗೊಳಿಸಲು ನಾವು ಇಚ್ಛಾಶಕ್ತಿಯೊಂದಿಗೆ ಮುಂದಾಗಬೇಕು- ಸಚಿವ ಅಶ್ವತ್ಥ ನಾರಾಯಣ.

BJP Mahila Morcha Executive Meeting held in Bengaluru
ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸಭೆ

ಬೆಂಗಳೂರು:ಭಾರತೀಯ ಜನತಾ ಪಕ್ಷವು ವ್ಯವಸ್ಥೆಯ ಸಕಾರಾತ್ಮಕ ಬದಲಾವಣೆಗೆ ಪೂರಕವಾಗಿದೆ. ಅಧಿಕಾರಕ್ಕೆ ಬಂದ ಮೇಲೆ ಹಿಂದೊಮ್ಮೆ ಊಹಿಸಲಿಕ್ಕೂ ಆಗದಿದದ್ದಂತಹ ಕಾರ್ಯಗಳು ಕೇಂದ್ರ ಮತ್ತು ರಾಜ್ಯದಲ್ಲಿ ಆಗಿವೆ ಎಂದು ಸಚಿವರೂ ಆದ ಮಲ್ಲೇಶ್ವರ ಶಾಸಕ ಡಾ. ಸಿ.ಎನ್ ಅಶ್ವತ್ಥ ನಾರಾಯಣ ಹೇಳಿದರು.

ಮಲ್ಲೇಶ್ವರ ಮಂಡಲದ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, 370ನೇ ವಿಧಿ ರದ್ದತಿ, ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಸೇರಿದಂತೆ ಹಲವಾರು ಕಾರ್ಯಗಳು ಪಕ್ಷದ ಸಂಕಲ್ಪ ಬಲದಿಂದ ಕಾರ್ಯಗತಗೊಂಡಿವೆ ಎಂದರು.

ಭಾರತವು ಜಾಗತಿಕ ಮಟ್ಟದಲ್ಲಿ ಸದೃಢವಾಗಿ ಮುನ್ನಡೆಯುತ್ತಿದೆ. ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಭಾರತವು ತನ್ನ ನಿಲುವುಗಳನ್ನು ಸ್ಪಷ್ಟವಾಗಿ ವ್ಯಕ್ತಪಡಿಸುತ್ತಾ ಜಗತ್ತಿನ ಗಮನವನ್ನು ತನ್ನೆಡೆಗೆ ಸೆಳೆದಿದೆ. ಸಮಾಜದಲ್ಲಿ ಜನರ ಪರಿಶ್ರಮವು ಪರಿಪೂರ್ಣವಾಗಿ ಈಡೇರಬೇಕಾದರೆ ಪೂರಕವಾದ ವ್ಯವಸ್ಥೆ ಇರುವುದು ಕೂಡ ಮುಖ್ಯ. ಇಂತಹ ವ್ಯವಸ್ಥೆಯನ್ನು ರೂಪಿಸುವುದೇ ಬಿಜೆಪಿ ಧ್ಯೇಯ ಎಂದರು.

ಬಿಜೆಪಿ ಮಹಿಳಾ ಮಂಡಲದ ಅಧ್ಯಕ್ಷೆ ಕಾವೇರಿ ಕೇದಾರನಾಥ್, ಗೀತಾಂಜಲಿ, ಆಶಾ ರಾವ್, ಉಷಾ, ರಜನಿ ಪೈ ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ:ಕುಮಾರಸ್ವಾಮಿ ಟ್ವೀಟ್​ಗೆ ಸಚಿವ ಅಶ್ವತ್ಥ ನಾರಾಯಣ ವಾಗ್ದಾಳಿ

ABOUT THE AUTHOR

...view details