ಕರ್ನಾಟಕ

karnataka

By

Published : Sep 30, 2019, 1:16 PM IST

ETV Bharat / state

ಮೇಯರ್ ಅಭ್ಯರ್ಥಿ ಆಯ್ಕೆ ಕಸರತ್ತು : ಸಭೆ ಮುಂದೂಡಿದ ಬಿಜೆಪಿ?

ನಾಳೆ ಮೇಯರ್ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಇಂದು‌ ಅಭ್ಯರ್ಥಿ ಆಯ್ಕೆ ಸಂಬಂಧ ಬಿಜೆಪಿ‌ ಸಭೆ ಕರೆದಿತ್ತು. ಆದರೆ, ಬೆಳಗ್ಗೆ 10 ಗಂಟೆಗೆ ಆರಂಭಗೊಳ್ಳಬೇಕಿದ್ದ ಸಭೆ ಮಧ್ಯಾಹ್ನವಾದರೂ ಆರಂಭಗೊಂಡಿಲ್ಲ. ಬಿಜೆಪಿ‌ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಇನ್ನೂ ಬೆಂಗಳೂರು‌ ತಲುಪಿಲ್ಲ.

ಬಿಜೆಪಿ ಕಚೇರಿ

ಬೆಂಗಳೂರು :ಬಿಜೆಪಿ ಕಚೇರಿಯಲ್ಲಿ ಇಂದು ಬೆಳಗ್ಗೆ ಮೇಯರ್​ ಅಭ್ಯರ್ಥಿ ಆಯ್ಕೆ ಸಂಬಂಧ ನಡೆಯಬೇಕಿದ್ದ ಸಭೆ ಮುಂದೂಡಿಕೆ ಮಾಡಲಾಗಿದೆ. ಮೇಯರ್ ಚುನಾವಣೆ ಮುಂದೂಡಿಕೆ ಮಾಡಲಾಗುತ್ತದೆ ಎನ್ನುವ ಮಾಹಿತಿ ಹಿನ್ನೆಲೆಯಲ್ಲಿ ಸಭೆ ಮುಂದೂಡಲಾಗಿದೆ ಎನ್ನಲಾಗಿದೆ.

ಪ್ರಸಕ್ತ ಅವಧಿಯ ಕೊನೆ ವರ್ಷದ ಮೇಯರ್ ಸ್ಥಾನ ಬಹುತೇಕ ಬಿಜೆಪಿಗೆ ದಕ್ಕುವುದು ಖಚಿತವಾದ ಹಿನ್ನೆಲೆಯಲ್ಲಿ ಆಕಾಂಕ್ಷಿಗಳು ಹೆಚ್ಚಾಗಿದ್ದು, ಬಿಜೆಪಿಗೆ ತಲೆಬಿಸಿ ತಂದಿದೆ. ಒಮ್ಮತದ ಅಭ್ಯರ್ಥಿ ಆಯ್ಕೆ ಕಠಿಣವಾದ ಕಾರಣ ಶಾಸಕ ರಘು ನೇತೃತ್ವದ ಸಮಿತಿ ರಚಿಸಿ ಶಾಸಕರು, ಪಾಲಿಕೆ ಸದಸ್ಯರ ಅಭಿಪ್ರಾಯದ ವರದಿಯನ್ನು ಬಿಜೆಪಿ ಪಡೆದುಕೊಂಡಿತ್ತು.

ನಾಳೆ ಮೇಯರ್ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಇಂದು‌ ಅಭ್ಯರ್ಥಿ ಆಯ್ಕೆ ಸಂಬಂಧ ಬಿಜೆಪಿ‌ ಸಭೆ ಕರೆದಿತ್ತು. ಆದರೆ, ಬೆಳಗ್ಗೆ 10 ಗಂಟೆಗೆ ಆರಂಭಗೊಳ್ಳಬೇಕಿದ್ದ ಸಭೆ ಮಧ್ಯಾಹ್ನವಾದರೂ ಆರಂಭಗೊಂಡಿಲ್ಲ. ಬಿಜೆಪಿ‌ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಇನ್ನೂ ಬೆಂಗಳೂರು‌ ತಲುಪಿಲ್ಲ. ಎಲ್ಲೋ ಒಂದು ಕಡೆ ಮೇಯರ್ ಚುನಾವಣೆ ಮುಂದೂಡಿಕೆ ಮಾಡಲಾಗುತ್ತದೆ ಎನ್ನುವ ಮಾಹಿತಿ ಹಿನ್ನೆಲೆಯಲ್ಲಿ ಸಭೆ ಮುಂದೂಡಿಕೆ ಮಾಡಲಾಗಿದೆ ಎನ್ನಲಾಗಿದೆ.

ABOUT THE AUTHOR

...view details