ಬೆಂಗಳೂರು:ಸಭಾಪತಿ ಸ್ಥಾನಕ್ಕೆ ಪ್ರತಾಪ್ ಚಂದ್ರ ಶೆಟ್ಟಿ ರಾಜೀನಾಮೆ ನೀಡದ ಹಿನ್ನೆಲೆಯಲ್ಲಿ ವಿಧಾನಪರಿಷತ್ ಕಲಾಪವನ್ನು ಇನ್ನೂ ಎರಡು ದಿನ ವಿಸ್ತರಿಸುವಂತೆ ಮನವಿ ಮಾಡಲಾಗಿದೆ ಎಂಬ ಮಾಹಿತಿ ಇದೆ.
ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ರಾಜೀನಾಮೆ ಕೊಡಿಸಲು ಪಣ ತೊಟ್ಟ ಸರ್ಕಾರ ಮತ್ತೆ ಎರಡು ದಿನ ಸದನ ಮುಂದುವರೆಸುವಂತೆ ಸಭಾಪತಿಗಳಿಗೆ ಪತ್ರ ಬರೆದಿದೆ ಎಂಬ ಮಾಹಿತಿ ಲಭಿಸಿದೆ. ಆದರೆ, ಈ ಸಂಬಂಧ ಸಭಾಪತಿಗಳಾಗಲಿ ಅಥವಾ ಬಿಜೆಪಿ ನಾಯಕರಾಗಲಿ ಅಧಿಕೃತ ಮಾಹಿತಿ ನೀಡಿಲ್ಲ.
ಕಳೆದ ವಿಧಾನಪರಿಷತ್ ಕಲಾಪ ಮುಂದೂಡಿದ್ದ ಸಭಾಪತಿಗಳ ನಿರ್ಧಾರವನ್ನು ಪ್ರಶ್ನಿಸಿ ಒಂದು ದಿನದ ಅಧಿವೇಶನ ನಡೆಸಲಾಗಿತ್ತು. ರಾಜ್ಯಪಾಲರಿಗೆ ಪತ್ರ ಬರೆಯುವ ಮೂಲಕ ಈ ಪ್ರಯತ್ನವನ್ನು ಬಿಜೆಪಿ ಮಾಡಿತ್ತು. ಆದರೆ, ಈ ಬಾರಿ ಅಂತಹ ಪರಿಸ್ಥಿತಿ ಮರುಕಳಿಸದಿರಲಿ ಎಂಬ ಕಾರಣದಿಂದ ಎರಡು ದಿನ ಮುಂಚಿತವಾಗಿಯೇ ಸಭಾಪತಿಗಳಿಗೆ ಪತ್ರ ಬರೆಯಲಾಗಿದೆ ಎಂಬ ಮಾಹಿತಿ ಇದೆ.