ಕರ್ನಾಟಕ

karnataka

ETV Bharat / state

ಬಿಜೆಪಿಯಿಂದ ಮಾಧ್ಯಮ ರಂಗವನ್ನು ನಿಯಂತ್ರಿಸುವ ಪ್ರಯತ್ನ: ಗುಂಡೂರಾವ್ ಆರೋಪ - ವಿಧಾನಸಭೆಯಲ್ಲಿ ಮಾಧ್ಯಮ ನಿಷೇಧಕ್ಕೆ ಗುಂಡೂರಾವ್ ವಿರೋಧ

ಮಾಧ್ಯಮ ಕ್ಷೇತ್ರವನ್ನು ತಮ್ಮ ನಿಯಂತ್ರಣದಲ್ಲಿ ಇಡಲು, ವಿಧಾನಸಭೆ ಕಲಾಪಗಳಿಗೆ ಮಾಧ್ಯಮದವರನ್ನು ನಿಷೇಧಿಸುತ್ತಿದೆ. ಇದು ಪ್ರಜಾಪ್ರಭುತ್ವ ಮೌಲ್ಯಗಳಿಗೆ ಕಂಟಕವಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದರು.

ಕೆಪಿಸಿಸಿ ಅಧ್ಯಕ್ಷ ದಿನೇಶ್​ ಗುಂಡೂರಾವ್

By

Published : Oct 12, 2019, 1:19 PM IST

Updated : Oct 12, 2019, 1:32 PM IST

ಬೆಂಗಳೂರು: ರಾಜ್ಯ ಹಾಗೂ ದೇಶದಲ್ಲಿ ಮಾಧ್ಯಮಗಳನ್ನು ನಿಯಂತ್ರಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಸದನದಲ್ಲಿ ಆಗುವ ಚರ್ಚೆಗಳನ್ನು ಸಾರ್ವಜನಿಕರಿಗೆ ತೋರಿಸುವ ಮುಕ್ತ ಅವಕಾಶವನ್ನು ಕಿತ್ತುಕೊಂಡಿರುವುದು ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಕೆಪಿಸಿಸಿ ದಿನೇಶ್​ ಗುಂಡೂರಾವ್ ಕಿಡಿಕಾರಿದ್ದಾರೆ.

ಕಾಂಗ್ರೆಸ್​ ಆಡಳಿತರ ಸರ್ಕಾರವಿದ್ದಾಗ, ಮಾಧ್ಯಮದವರು ಎಷ್ಟೆ ಆರೋಪ, ಟೀಕೆಗಳನ್ನು ಮಾಡಿದರೂ ಅವುಗಳನ್ನು ನಿಷೇಧ ಮಾಡಿರಲಿಲ್ಲ.ಬಿಜೆಪಿಯ ಈ ಕ್ರಮವನ್ನು ಖಂಡಿಸುತ್ತೇವೆ ಎಂದು ಹೇಳಿದರು.

ಪರಮೇಶ್ವರ್ ಮನೆ ಮೇಲೆ ಐಟಿ ದಾಳಿ ಪ್ರಕರಣ: ಬಿಜೆಪಿ ವಿರುದ್ಧ ಮಾತನಾಡುವವರನ್ನು ಹತ್ತಿಕ್ಕಲು ಆದಾಯ ತೆರಿಗೆ ಇಲಾಖೆ, ಜಾರಿ ನಿರ್ದೇಶನಾಲಯ ಹಾಗೂ ಸಿಬಿಐಗಳನ್ನು ಬಳಸಿಕೊಳ್ಳಲಾಗುತ್ತಿದೆ. ದ್ವೇಷ ರಾಜಕೀಯದಿಂದ ಬಿಜೆಪಿ ಹೀಗೆ ಮಾಡುತ್ತಿದೆ ಎಂದು ಆರೋಪಿಸಿದರು.

ಸೆಕ್ಸ್​ ಟೇಪ್​ ನೋಡಿದವರಾರು? ಅವರು ಯಾವ ಪಕ್ಷದಲ್ಲಿ ಇದ್ದಾರೆ? ಆ ಸುದ್ದಿಯನ್ನು ಬಯಲಿಗೆ ತಂದಿದ್ದು ಮಾಧ್ಯಮದವರು. ಕೆಲವು ನಿಯಮ ಅಥವಾ ಸಲಹೆಗಳನ್ನು ಮಾಡಿ ಮಾಧ್ಯಮದವರಿಗೆ ಅವಕಾಶ ಕಲ್ಪಿಸಬೇಕು ಎಂದು ಹೇಳಿದರು.

Last Updated : Oct 12, 2019, 1:32 PM IST

ABOUT THE AUTHOR

...view details