ಬೆಂಗಳೂರು: ರಾಜ್ಯ ಹಾಗೂ ದೇಶದಲ್ಲಿ ಮಾಧ್ಯಮಗಳನ್ನು ನಿಯಂತ್ರಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಸದನದಲ್ಲಿ ಆಗುವ ಚರ್ಚೆಗಳನ್ನು ಸಾರ್ವಜನಿಕರಿಗೆ ತೋರಿಸುವ ಮುಕ್ತ ಅವಕಾಶವನ್ನು ಕಿತ್ತುಕೊಂಡಿರುವುದು ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಕೆಪಿಸಿಸಿ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ.
ಕಾಂಗ್ರೆಸ್ ಆಡಳಿತರ ಸರ್ಕಾರವಿದ್ದಾಗ, ಮಾಧ್ಯಮದವರು ಎಷ್ಟೆ ಆರೋಪ, ಟೀಕೆಗಳನ್ನು ಮಾಡಿದರೂ ಅವುಗಳನ್ನು ನಿಷೇಧ ಮಾಡಿರಲಿಲ್ಲ.ಬಿಜೆಪಿಯ ಈ ಕ್ರಮವನ್ನು ಖಂಡಿಸುತ್ತೇವೆ ಎಂದು ಹೇಳಿದರು.