ಕರ್ನಾಟಕ

karnataka

ETV Bharat / state

ವರಿಷ್ಠರ ನಿರ್ದೇಶನದಂತೆ ಖಾತೆ ಹಂಚಿಕೆ, ನಮ್ಮಲ್ಲಿ ಯಾವುದೇ ಅಸಮಾಧಾನವಿಲ್ಲ: ಸಿಎಂ - ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಬಿಜೆಪಿ ವರಿಷ್ಠರ ನಿರ್ದೇಶನದಂತೆ ನೂತನ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ವರಿಷ್ಠರ ನಿರ್ದೇಶನದಂತೆ ಖಾತೆ ಹಂಚಿಕೆ: ಸಿಎಂ

By

Published : Aug 27, 2019, 6:03 PM IST

ಬೆಂಗಳೂರು: ಬಿಜೆಪಿ ವರಿಷ್ಠರ ನಿರ್ದೇಶನದಂತೆ ನೂತನ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ವರಿಷ್ಠರ ನಿರ್ದೇಶನದಂತೆ ಖಾತೆ ಹಂಚಿಕೆ: ಸಿಎಂ
ಬಿಜೆಪಿ ನೂತನ ರಾಜ್ಯಾಧ್ಯಕ್ಷರ ಪದಗ್ರಹಣದ ಸಮಾರಂಭದ ಬಳಿಕ ಪಕ್ಷದ ಕಚೇರಿಗೆ ತೆರಳಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೂತನ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಜೊತೆ ಬಿಜೆಪಿ ಕಚೇರಿ ಪ್ರವೇಶ ಮಾಡಿದರು. ಮೊದಲನೇ ಮಹಡಿಯಲ್ಲಿ ಭಾರತಾಂಬೆ ಭಾವಚಿತ್ರಕ್ಕೆ ಪುಷ್ಪಾರ್ಪಣೆ ನೆರವೇರಿಸಿದ ನಂತರ ರಾಜ್ಯಾಧ್ಯಕ್ಷರ ಕೊಠಡಿ ಪ್ರವೇಶ ಮಾಡಿ ನೂತನ ರಾಜ್ಯಾಧ್ಯಕ್ಷರನ್ನು ಆಸನದಲ್ಲಿ ಕೂರಿಸಿ ಅಧಿಕೃತ ಕಾರ್ಯಾರಂಭಕ್ಕೆ ಸಿಎಂ ಚಾಲನೆ ನೀಡಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸರ್ಕಾರದಲ್ಲಿ ಯಾವುದೇ ಅಸಮಾಧಾನವಿಲ್ಲ .ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಮಾರ್ಗದರ್ಶನದಲ್ಲಿ ನಾವು ಮುಂದುವರೆಯುತ್ತೇವೆ, ಹೈಕಮಾಂಡ್ ನಿರ್ದೇಶನದಂತೆ ಸಚಿವರಿಗೆ ಖಾತೆ ಹಂಚಲಾಗಿದೆ ಎಂದಿದ್ದಾರೆ.

ABOUT THE AUTHOR

...view details