ಬೆಂಗಳೂರು:ಇಂದು ಸಂಜೆ ರಾಜಭವನದಲ್ಲಿ ನಡೆಯಲಿರುವ ಬಿ.ಎಸ್.ಯಡಿಯೂರಪ್ಪ ಅವರ ಪ್ರಮಾಣವಚನ ಸ್ವೀಕಾರ ಹಿನ್ನೆಲೆಯಲ್ಲಿ, ರಾಜಭವನ ಸುತ್ತಮುತ್ತಲಿನ ರಸ್ತೆಗಳಲ್ಲಿ ಸಂಚಾರ ದಟ್ಟಣೆಯಾಗಲಿದ್ದು, ಮುಂಜಾಗ್ರತ ಕ್ರಮವಾಗಿ ಈ ರಸ್ತೆಯಲ್ಲಿ ಓಡಾಡುವ ವಾಹನ ಸವಾರರು ಪರ್ಯಾಯ ಮಾರ್ಗ ಬಳಸುವಂತೆ ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ.
ಬಿಎಸ್ ವೈ ಪ್ರಮಾಣ ವಚನ ಸ್ವೀಕಾರ: ಪರ್ಯಾಯ ಮಾರ್ಗ ಬಳಸುವಂತೆ ವಾಹನ ಸವಾರರಲ್ಲಿ ಮನವಿ - parking
ಇಂದು ಸಂಜೆ ಬಿಎಸ್ವೈ ಪ್ರಮಾಣ ಸ್ವೀಕಾರ ಮಾಡಲಿದ್ದು, ರಾಜಭವನದ ಸುತ್ತ ಮುತ್ತ ವಾಹನ ದಟ್ಟಣೆ ಹೆಚ್ಚಾಗಿ ಇರಲಿದೆ. ಹೀಗಾಗಿ ಪರ್ಯಾಯ ಮಾರ್ಗ ಬಳಸುವುದು ಸುಗಮ ಎಂದು ನಗರ ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
![ಬಿಎಸ್ ವೈ ಪ್ರಮಾಣ ವಚನ ಸ್ವೀಕಾರ: ಪರ್ಯಾಯ ಮಾರ್ಗ ಬಳಸುವಂತೆ ವಾಹನ ಸವಾರರಲ್ಲಿ ಮನವಿ](https://etvbharatimages.akamaized.net/etvbharat/prod-images/768-512-3953053-thumbnail-3x2-bng.jpg)
ರಾಜಭವನ
ಸಂಜೆ 6ರಿಂದ 6.30 ವರೆಗೆ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ವೇಳೆ ಬಿಜೆಪಿ ಶಾಸಕರು, ಮುಖಂಡರು ಹಾಗೂ ಗಣ್ಯರು ಆಗಮಿಸಲಿಸದ್ದಾರೆ. ಇದರಿಂದ ರಾಜಭವನದ ಹೊರಗೆ ಬಿಜೆಪಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವುದರಿಂದ ಟ್ರಾಫಿಕ್ ಸಮಸ್ಯೆ ಹೆಚ್ಚಾಗಲಿದೆ ಎಂದು ತಿಳಿಸಿದರು.
ಸುಗಮ ಸಂಚಾರಕ್ಕಾಗಿ ಈ ಭಾಗದಲ್ಲಿ ಸಂಚರಿಸುವ ವಾಹನ ಸವಾರರು ಆದಷ್ಟು ಪರ್ಯಾಯ ಮಾರ್ಗ ಬಳಸುವಂತೆ ನಗರ ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಪಿ.ಹರಿಶೇಖರನ್ ಮನವಿ ಮಾಡಿದ್ದಾರೆ.
TAGGED:
parking