ಕರ್ನಾಟಕ

karnataka

ETV Bharat / state

ಆಗಸ್ಟ್​ 6ರಂದು ದೆಹಲಿಯಲ್ಲಿ ಬಿಎಸ್‌ವೈ ಮಹತ್ವದ ಚರ್ಚೆ; ರಾಜ್ಯ ಸಂಸದರಿಗೆ ಭೋಜನಕೂಟ - ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ

ರಾಜ್ಯದ ಲೋಕಸಭೆ ಮತ್ತು ರಾಜ್ಯಸಭೆ ಸದಸ್ಯರ ಜೊತೆ ಸಿಎಂ ಬಿಎಸ್ ಯಡಿಯೂರಪ್ಪ ಆಗಸ್ಟ್​ 6ರಂದು ದೆಹಲಿಯ ಖಾಸಗಿ ಹೋಟೆಲ್​​ನಲ್ಲಿ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.

ಬಿಎಸ್​ ಯಡಿಯೂರಪ್ಪ,BS Yediyurappa

By

Published : Aug 2, 2019, 11:26 PM IST

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಆಗಸ್ಟ್​ 6ರಂದು ರಾಜ್ಯದ ಸಂಸದರೊಂದಿಗೆ ದೆಹಲಿಯಲ್ಲಿ ಮಹತ್ವದ ಚರ್ಚೆ ನಡೆಸಲಿದ್ದಾರೆ.

ರಾಜ್ಯ ಸರ್ಕಾರದಿಂದ ಕಳುಹಿಸಲಾಗಿರುವ ಯೋಜನೆಗಳಿಗೆ ಸಂಬಂಧಿಸಿದ ಪ್ರಸ್ತಾವಣೆಗಳು ಹಾಗೂ ಬಾಕಿ ಉಳಿದಿರುವ ವಿವಿಧ ಯೋಜನೆಗಳ ಕುರಿತು ಈ ಸಭೆಯಲ್ಲಿ ವಿಸ್ತೃತ ಚರ್ಚೆಯಾಗುವ ಸಾಧ್ಯತೆ ಇದೆ.

ರಾಜ್ಯದ ಎಲ್ಲ ಸಂಸದರು ಈ ಸಭೆಯಲ್ಲಿ ಭಾಗಿಯಾಗುವಂತೆ ಬಿಎಸ್​ವೈ ಮನವಿ ಮಾಡಿದ್ದು, ಖಾಸಗಿ ಹೋಟೆಲ್‌ನಲ್ಲಿ ಭೋಜನಕೂಟವನ್ನೂ ಏರ್ಪಡಿಸಿದ್ದಾರೆ.

ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಬಿಎಸ್‌ವೈ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಗೃಹ ಸಚಿವ ಅಮಿತ್​ ಶಾ ಜೊತೆ ಚರ್ಚೆ ನಡೆಸಲಿದ್ದಾರೆ.

ABOUT THE AUTHOR

...view details