ಕರ್ನಾಟಕ

karnataka

ETV Bharat / state

ಸಂಪುಟ ವಿಸ್ತರಣೆ ಕುರಿತು ಖಾಸಗಿ ಹೋಟೆಲ್​ನಲ್ಲಿ ಬಿಎಸ್​ವೈ-ಗಡ್ಕರಿ ಚರ್ಚೆ? - bangalore latest news

ಸಂಪುಟ ವಿಸ್ತರಣೆ ಕುರಿತು ಭಾರಿ ಚರ್ಚೆಯಾಗುತ್ತಿರುವ ನಡುವೆ ಇಂದು ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಅವರ ಜೊತೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಚರ್ಚೆ ನಡೆಸಿರುವುದು ಕುತೂಹಲ ಮೂಡಿಸಿದೆ.

BSY-Gadkari talks at a private hotel
ಸಂಪುಟ ವಿಸ್ತರಣೆ ಕುರಿತು ಖಾಸಗಿ ಹೋಟೆಲ್​ನಲ್ಲಿ ಬಿಎಸ್​ವೈ-ಗಡ್ಕರಿ ಚರ್ಚೆ?

By

Published : Jan 25, 2020, 9:18 PM IST

ಬೆಂಗಳೂರು :ಬಹು ದಿನಗಳಿಂದ ಉಳಿದಿರುವ ಸಂಪುಟ ವಿಸ್ತರಣೆ ಕುರಿತು ಭಾರಿ ಚರ್ಚೆಯಾಗುತ್ತಿರುವ ನಡುವೆ ಇಂದು ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಅವರ ಜೊತೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಚರ್ಚೆ ನಡೆಸಿರುವುದು ಕುತೂಹಲ ಮೂಡಿಸಿದೆ.

ನಗರದ ಖಾಸಗಿ ಹೋಟೆಲ್​ವೊಂದರಲ್ಲಿ ಟಿವಿಎಸ್ ಮೋಟರ್ ಕಂಪನಿಯ ಎಲೆಕ್ಟ್ರಿಕ್ ದ್ವಿಚಕ್ರವಾಹನ ಬಿಡುಗಡೆ ಕಾರ್ಯಕ್ರಮದ ಬಳಿಕ ಅದೇ ಹೋಟೆಲ್​ನಲ್ಲಿ ನಿತಿನ್ ಗಡ್ಕರಿ ಹಾಗೂ ಯಡಿಯೂರಪ್ಪನವರು ಸುಮಾರು ಅರ್ಧ ಗಂಟೆಗಳ ಕಾಲ ಮಾತುಕತೆ ನಡೆಸಿದ್ದಾರೆ.

ಈಗಾಗಲೇ ಅಮಿತ್ ಶಾ ಅವರ ಜೊತೆ ಚರ್ಚೆ ನಡೆಸಿರುವ ಸಿಎಂ ಯಡಿಯೂರಪ್ಪನವರು, ಇಂದು ನಿತಿನ್ ಗಡ್ಕರಿ ಜೊತೆ ಸಂಪುಟ ವಿಸ್ತರಣೆ ಕುರಿತು ಚರ್ಚೆ ನಡೆಸಿ ಈ ಸಂಬಂಧ ಕೆಲ ಮಾಹಿತಿಗಳನ್ನು ಅವರಿಗೆ ನೀಡಿದ್ದಾರೆ ಎನ್ನಲಾಗಿದೆ. ಸಚಿವ ಸಂಪುಟ ವಿಸ್ತರಣೆಗೆ ಕೇಂದ್ರದ ವರಿಷ್ಠರು ಬಹುತೇಕ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಆದರೆ, ಸಂಪುಟಕ್ಕೆ ಎಷ್ಟು ಮಂದಿಯನ್ನು ತೆಗೆದುಕೊಳ್ಳಬೇಕು, ಉಪಚುನಾವಣೆಯಲ್ಲಿ ಗೆದ್ದವರೆಷ್ಟು?, ಮೂಲ ಬಿಜೆಪಿಯವರೆಷ್ಟು? ಎಂಬ ಗೊಂದಲದಲ್ಲಿ ಬಿಎಸ್​ವೈ ಇದ್ದು, ಈ ಬಗ್ಗೆಯೂ ನಿತಿನ್ ಗಡ್ಕರಿ ಜೊತೆ ಸಮಾಲೋಚಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ನಂತರ ಖಾಸಗಿ ಹೋಟೆಲ್​ನಿಂದ ಒಂದೇ ಕಾರಿನಲ್ಲಿ ನಿತಿನ್ ಗಡ್ಕರಿ ಹಾಗೂ ಯಡಿಯೂರಪ್ಪ ತೆರಳಿದರು. ವಿದೇಶ ಪ್ರವಾಸದಿಂದ ನಿನ್ನೆಯಷ್ಟೇ ಯಡಿಯೂರಪ್ಪನವರು ನಗರಕ್ಕೆ ಬಂದ ತಕ್ಷಣ ಸಂಪುಟ ವಿಸ್ತರಣೆ ಕುರಿತು ಚರ್ಚೆ ನಡೆಸಿದ್ದರು. ನಿನ್ನೆಯಿಂದ ಹಲವು ಊಹಾಪೋಹಗಳು ಹರಿದಾಡುತ್ತಿದ್ದು, ಇದರಿಂದ ಬಿಎಸ್​ವೈ ಪೇಚಿಗೆ ಸಿಲುಕಿದ್ದಾರೆ ಎನ್ನಲಾಗಿದೆ.

ABOUT THE AUTHOR

...view details