ಬೆಂಗಳೂರು: ಸರ್ಕಾರ ರಚನೆಯ ಉತ್ಸಾಹದಲ್ಲಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಫುಲ್ ರಿಲ್ಯಾಕ್ಸ್ ಆಗಿದ್ದು, ಶಾಸಕರೊಂದಿಗೆ ಕ್ರಿಕೆಟ್ ಆಡುತ್ತಾ ಕಾಲ ಕಳೆದರು.
ಕಳೆದ ಎರಡು ವಾರದಿಂದ ಸರಣಿ ಸಭೆಗಳನ್ನು ನಡೆಸುವುದರಲ್ಲಿ ನಿರತರಾಗಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಇದೀಗ ಸ್ವಲ್ಪ ನಿರಾಳರಾಗಿದ್ದಾರೆ. ಗುರು ಪೂರ್ಣಿಮೆ ದಿನವಾದ ಇಂದು ಬಿಜೆಪಿ ಶಾಸಕರು ತಂಗಿರುವ ರಮಡ ರೆಸಾರ್ಟ್ನಲ್ಲಿಯೇ ಇದ್ದು ಕಾಲ ಕಳೆದರು.