ಕರ್ನಾಟಕ

karnataka

ಕೌಟುಂಬಿಕ ಕಲಹ, ಸಾಲಬಾಧೆ ತಾಳದೆ ಕ್ಯಾಬ್​ ಚಾಲಕ ಆತ್ಮಹತ್ಯೆ

ಲಾಕ್​ಡೌನ್​​​ನಿಂದ​ ಯಾವುದೇ ಕೆಲಸವಿಲ್ಲದೆ ಮಾಡಿಕೊಂಡ ಸಾಲ ತೀರಿಸಲಾಗದೆ ಸಂಕಷ್ಟಕ್ಕೆ ಸಿಲಿಕಿದ್ದ. ಮತ್ತೊಂದೆಡೆ ಕುಟುಂಬದಲ್ಲಿ ಆಗಾಗ ಕಲಹಗಳು ನಡೆಯುತ್ತಿದ್ದವು. ಇದರಿಂದ ಮನನೊಂದ ಕ್ಯಾಬ್​ ಚಾಲಕ ಆತ್ಮಹತ್ಯೆಗೆ ಶರಣಾಗಿದ್ದಾನೆ.

By

Published : May 20, 2020, 12:14 PM IST

Published : May 20, 2020, 12:14 PM IST

Cab driver committed suicide at KR Puram
ಕ್ಯಾಬ್​ ಚಾಲಕ ಆತ್ಮಹತ್ಯೆಗೆ ಶರಣು

ಕೆ.ಆರ್.​ಪುರಂ/ಬೆಂಗಳೂರು:ಕೌಟುಂಬಿಕ ಕಲಹ ಹಾಗೂ ಸಾಲದ ಸುಳಿಗೆ ಸಿಲುಕಿದ್ದ ಕ್ಯಾಬ್​ ಚಾಲಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ರಾಮಮೂರ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ವಿಜಿನಾಪುರದಲ್ಲಿ ನಡೆದಿದೆ.

ಕ್ಯಾಬ್​ ಚಾಲಕ ಆತ್ಮಹತ್ಯೆಗೆ ಶರಣು

ಮಣಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಈತ ಕ್ಯಾಬ್​ ಚಾಲಕನಾಗಿದ್ದು, ಲಾಕ್​ಡೌನ್​​​ನಿಂದ​ ಯಾವುದೇ ಕೆಲಸವಿಲ್ಲದೆ ಮಾಡಿಕೊಂಡ ಸಾಲವನ್ನು ತೀರಿಸಲಾಗದೆ ಸಂಕಷ್ಟಕ್ಕೆ ಸಿಲಿಕಿದ್ದ. ಮತ್ತೊಂದೆಡೆ ಕುಟುಂಬದಲ್ಲಿ ಆಗಾಗ ಕಲಹಗಳು ನಡೆಯುತ್ತಿದ್ದವಂತೆ. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗುತ್ತಿದೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ರಾಮಮೂರ್ತಿನಗರ ಪೊಲೀಸರು, ಮರಣೋತ್ತರ ಪರೀಕ್ಷೆ ನಡೆಸಿ ಇಂದು ಕುಟುಂಬದವರಿಗೆ ಮೃತದೇಹ ಹಸ್ತಾಂತರಿಸಿದರು.

ABOUT THE AUTHOR

...view details