ಬೆಂಗಳೂರು: ಡಿಸೆಂಬರ್ತನಕ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆ ಮಾಡದಿರಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಕೊರೊನಾ ಕಾರಣಕ್ಕೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸಚಿವ ಬಸವರಾಜ್ ಬೊಮ್ಮಾಯಿ ಸ್ಪಷ್ಟಪಡಿಸಿದರು.
ಡಿಸೆಂಬರ್ವರೆಗೆ ಜಿ.ಪಂ, ತಾ.ಪಂ ಚುನಾವಣೆ ನಡೆಸದಿರಲು ಸರ್ಕಾರ ತೀರ್ಮಾನ - ಸಚಿವ ಬೊಮ್ಮಾಯಿ,
ಡಿಸೆಂಬರ್ವರೆಗೆ ಜಿ.ಪಂ ಮತ್ತು ತಾ.ಪಂ ಚುನಾವಣೆ ನಡೆಸದಿರಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಚುನಾವಣೆ ನಡೆಸದಿರಲು ಸಂಪುಟ ಸಭೆ ತೀರ್ಮಾನ
ಸಚಿವ ಬಸವರಾಜ್ ಬೊಮ್ಮಾಯಿ
ಜಿ.ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಅವಧಿ ಫೆಬ್ರವರಿಗೆ ಅಂತ್ಯವಾಗಿತ್ತು. ಚುನಾವಣೆ ಸಂಬಂಧ ಆಕಾಂಕ್ಷಿಗಳು ಸಾಕಷ್ಟು ನಿರೀಕ್ಷೆ ಇಟ್ಟಿದ್ದರು. ಇದೀಗ ಡಿಸೆಂಬರ್ವರೆಗೆ ಚುನಾವಣೆ ಮುಂದೂಡಿದ್ದು ಆಕಾಂಕ್ಷಿಗಳಲ್ಲಿ ನಿರಾಸೆ ಮೂಡಿಸಿದೆ.