ಕರ್ನಾಟಕ

karnataka

ETV Bharat / state

ಗಾಂಧಿ ಕುಟುಂಬದ ಕೈಗೆ ಬಂದ ತುತ್ತು ಡಿಕೆಶಿ ಬಾಯಿಗೆ ಬರಲಿಲ್ಲ: ಬಿಜೆಪಿ ವ್ಯಂಗ್ಯ - ಟ್ವೀಟ್​ ಮೂಲಕ ಕಾಂಗ್ರೆಸ್​ ಕಾಲೆಳೆದ ಬಿಜೆಪಿ

ನೀವೆಷ್ಟೇ ಗುಲಾಮಗಿರಿ, ಚಮಚಾಗಿರಿ ಮಾಡಿದರೂ ನಕಲಿ ಗಾಂಧಿಗಳು ನಿಮ್ಮನ್ನು ಇಡುವಲ್ಲಿಯೇ ಇಡುತ್ತಾರೆ. ಹೈಕಮಾಂಡ್‌ ಮಟ್ಟದಲ್ಲಿ ಟ್ರಬಲ್‌ ಶೂಟರ್‌ ಎನಿಸಿಕೊಂಡಿರುವ ನಿಮ್ಮ ಹುಟ್ಟುಹಬ್ಬದ ದಿನ ಕೇಕ್ ತಿನ್ನಿಸುವಷ್ಟು ಸೌಜನ್ಯತೆ ಪ್ರಿಯಾಂಕಾ ಗಾಂಧಿಗೆ ಇಲ್ಲ. ಮತ್ತೊಬ್ಬರ‌ ಕೈಯಲ್ಲಿ ಕೇಕ್‌ ತಿನ್ನಿಸುವ ಪ್ರಮೇಯವೇನಿತ್ತು? ಎಂದು ಬಿಜೆಪಿ ಟ್ವೀಟ್​ ಮೂಲಕ ವ್ಯಂಗ್ಯವಾಡಿದೆ.

ಬಿಜೆಪಿ ವ್ಯಂಗ್ಯ
ಬಿಜೆಪಿ ವ್ಯಂಗ್ಯ

By

Published : May 17, 2022, 3:10 PM IST

ಬೆಂಗಳೂರು: ದೇಶ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಆಚರಿಸುವ ಈ ಹೊತ್ತಿನಲ್ಲಿ, ನಕಲಿ ಗಾಂಧಿ ವಂಶದವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಮೂರನೇ ದರ್ಜೆಯವರಂತೆ ನಡೆಸಿಕೊಳ್ಳುತ್ತಿದ್ದಾರೆ. ಕನಕಪುರದ ಬಂಡೆ ಹೀಗೆ ಬಗ್ಗಿದ್ದು, ಕುಗ್ಗಿದ್ದು ಅಸಹಾಯಕತನದ ಪರಮಾವಧಿಯಲ್ಲದೆ ಮತ್ತೇನು? ಎಂದು ಬಿಜೆಪಿ ವ್ಯಂಗ್ಯವಾಡಿದೆ.

ಅವರ ಕೈಗೆ ಬಂದ ತುತ್ತು, ನಿಮ್ಮ ಬಾಯಿಗೆ ಬರುವುದಿಲ್ಲ. ಈ ಸತ್ಯವನ್ನು ಈಗಲಾದರೂ ಅರಿತುಕೊಳ್ಳಿ. ಕಾಣದ ಕೈಗಳು ನಿಮ್ಮ ಅಧಿಕಾರವನ್ನು ನಿಮ್ಮ ಮುಂದೆಯೇ ಹೀಗೆಯೇ ಕಿತ್ತುಕೊಳ್ಳುತ್ತಾರೆ. ನಿಮ್ಮ ಧನ ಬಲ ಮಾತ್ರ ಬಳಸಿಕೊಳ್ಳುತ್ತಾರೆ. ಅಧಿಕಾರದ ಸಮಯದಲ್ಲಿ ದೂರ ಇಡುತ್ತಾರೆ. ಅಸಹಾಯಕ ಡಿಕೆಶಿ ಇಷ್ಟೊಂದು ದುರ್ಬಲವೇ? ಎಂದು ಪ್ರಿಯಾಂಕಾ ಗಾಂಧಿ ಕೇಕ್ ತಿನ್ನಿಸಲು ಹಿಂದೇಟು ಹಾಕಿದ್ದನ್ನು ಪ್ರಸ್ತಾಪಿಸಿ ಬಿಜೆಪಿ ಟ್ವೀಟ್ ಮೂಲಕ ಡಿಕೆಶಿ ಕಾಲೆಳೆದಿದೆ.

ನೀವೆಷ್ಟೇ ಗುಲಾಮಗಿರಿ, ಚಮಚಾಗಿರಿ ಮಾಡಿದರೂ ನಕಲಿ ಗಾಂಧಿಗಳು ನಿಮ್ಮನ್ನು ಇಡುವಲ್ಲಿಯೇ ಇಡುತ್ತಾರೆ. ಹೈಕಮಾಂಡ್ ಮಟ್ಟದಲ್ಲಿ ಟ್ರಬಲ್ ಶೂಟರ್ ಎನಿಸಿಕೊಂಡಿರುವ ಡಿ.ಕೆ. ಶಿವಕುಮಾರ್ ಅವರ ಹುಟ್ಟುಹಬ್ಬದ ದಿನ ಕೇಕ್ ತಿನ್ನಿಸುವಷ್ಟು ಸೌಜನ್ಯತೆ ಪ್ರಿಯಾಂಕಾ ಗಾಂಧಿಗೆ ಇಲ್ಲವೇ. ಮತ್ತೊಬ್ಬರ ಕೈಯಲ್ಲಿ ಕೇಕ್ ತಿನ್ನಿಸುವ ಪ್ರಮೇಯವೇನಿತ್ತು? ಕೇಕ್ ತಿನ್ನಿಸಲು ನಿರಾಕರಣೆ, ರಮ್ಯಾ ಟ್ವೀಟ್ ದಾಳಿ, ಎಂ.ಬಿ. ಪಾಟೀಲ್ ಸಿಡಿದೆದ್ದಿದ್ದು, ಸಿದ್ದರಾಮಯ್ಯ ಬಣದ ಇತ್ತೀಚೆಗಿನ ನಡೆ, ಕೆಪಿಸಿಸಿ ಕಚೇರಿಯಲ್ಲಿ ಭ್ರಷ್ಟಾಚಾರದ ಆರೋಪ ಇದೆಲ್ಲವೂ ಡಿಕೆಶಿ ಅವರನ್ನು ಹರಕೆಯ ಕುರಿ ಮಾಡುವ ತಂತ್ರ. ಈ ಎಲ್ಲ ಘಟನೆಗಳು ಏನೋ ಮುನ್ಸೂಚನೆ ನೀಡುತ್ತಿರುವುದು ನಿಜವಲ್ಲವೇ? ಎಂದು ಬಿಜೆಪಿ ಸರಣಿ ಟ್ವೀಟ್ ಮಾಡಿದೆ.

ಇದನ್ನೂ ಓದಿ:ಈಟಿವಿ ಭಾರತ ಫಲಶ್ರುತಿ: ಶಾಲಾ ಕಟ್ಟಡ ದುರಸ್ತಿಗೆ ಜಿಲ್ಲಾಡಳಿತದಿಂದ ₹ 20 ಲಕ್ಷ ಬಿಡುಗಡೆ

ನೀವು ಸುಳ್ಳು ಹೇಳುತ್ತಲೇ ದೇಶ ಆಳಿದವರು. ಅಧಿಕಾರವಿಲ್ಲದಿದ್ದಾಗಲೂ ಸುಳ್ಳನ್ನೇ ಅರುಹುತ್ತಿದ್ದೀರಿ. ಭಗತ್ ಸಿಂಗ್ ಗದ್ಯ ಪಾಠವನ್ನು ಪಠ್ಯದಿಂದ ಕೈಬಿಟ್ಟಿಲ್ಲ. ಸುಳ್ಳುಗಳಿಂದ ಚುನಾವಣೆ ಗೆಲ್ಲಲಾಗದು. ಹಿಂದೂ ವಿರೋಧಿಗಳಾಗಿದ್ದ ಘಜಿನಿ, ಘೋರಿಗಳನ್ನು ಪಠ್ಯದಲ್ಲಿ ಆರಾಧನೆ ಮಾಡಿದ್ದು, ಯಾರನ್ನು ಓಲೈಸಲು? ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ.

For All Latest Updates

TAGGED:

ABOUT THE AUTHOR

...view details