ಬೆಂಗಳೂರು :ಕೊರೊನಾ ಎಫೆಕ್ಟ್ನಿಂದ ಗ್ರಾಮೀಣ ಭಾಗ, ತಾಲೂಕು ಕೇಂದ್ರಗಳಲ್ಲಿ ಜನರಿಗೆ ಸರ್ಕಾರಿ ಆಸ್ಪತ್ರೆಗಳ ವೈದ್ಯರನ್ನು ಹೊರತುಪಡಿಸಿ ಖಾಸಗಿ ವೈದ್ಯರು, ಖಾಸಗಿ ನರ್ಸಿಂಗ್ ಹೋಂಗಳು ಕಾರ್ಯ ನಿರ್ವಹಿಸುತ್ತಿಲ್ಲ. ಇದರಿಂದ ಗ್ರಾಮೀಣ ಭಾಗದ ರೋಗಿಗಳು ಪರದಾಡುವಂತಾಗಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸರ್ಕಾರ ಐಎಂಎ ಮುಖ್ಯಸ್ಥರ ಜೊತೆ ಚರ್ಚೆ ನಡೆಸಿ ಕೂಡಲೇ ರೋಗಿಗಳಿಗೆ ಚಿಕಿತ್ಸೆ ನೀಡಲು ಮುಂದಾಗುವಂತೆ ಐಎಂಎ ಮೂಲಕ ಸೂಚಿಸಬೇಕು. ಇಲ್ಲದಿದ್ದರೆ ಐಎಂಎ ನೋಂದಣಿ ರದ್ದುಗೊಳಿಸುವ ಎಚ್ಚರಿಕೆಯನ್ನೂ ನೀಡಬೇಕು ಎಂದು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.